Wednesday, July 24, 2013

ಬೆಳ್ಳಿ ಮೋಡದ ಅಂಚಿನಿಂದ - ಬೆಳ್ಳಿ ಮೋಡ (1966)

ಚಿತ್ರ ನಿರ್ದೇಶನಕ್ಕೆ ಮಾಂತ್ರಿಕ ಸ್ಪರ್ಶ ತಂದ ಗಾರುಡಿಗನ ತೆರೆಕಂಡ ಮೊದಲ ಚಿತ್ರದ ಹೆಸರು ಇದಕ್ಕಿಂತ ಅಮೋಘ ಹೆಸರು ಬೇಕಿರಲಿಲ್ಲ ಅನ್ನಿಸುತ್ತೆ.. ಬೆಳ್ಳಿ ಮೋಡ.....  ವಾಹ್!


ಪಿ ಬಿ ಶ್ರೀನಿವಾಸ್, ಪಿ ಸುಶೀಲ, ಎಸ್ ಜಾನಕಿ, ಬಿ ಕೆ ಸುಮಿತ್ರ ಅವರ ಸುಮಧುರ ಕಂಠದಲ್ಲಿ
ದ ರಾ ಬೇಂದ್ರೆ  ಮತ್ತು ಅರ್ ಏನ್ ಜಯಗೋಪಾಲ್  ಬರೆದಿರುವ ಸಾಹಿತ್ಯವನ್ನು
ತಮ್ಮ ಉತ್ಕ್ರುಷ್ಟ ಸಂಗೀತದಲ್ಲಿ ಮಿಳಿತಗೊಳಿಸಿರುವ ಸಂಗೀತ ಗಾರುಡಿಗ ವಿಜಯಭಾಸ್ಕರ್
ಕಪ್ಪು ಬಿಳುಪಿನಲ್ಲಿ ಸೆರೆ ಹಿಡಿದು ಕೊಟ್ಟಿರುವ ಛಾಯಾಗ್ರಾಹಕ ಆರ್ ಏನ್ ಕೃಷ್ಣಪ್ರಸಾದ್ 
ಬಿಗಿ ಹಿಡಿತದಲ್ಲಿ ಸಂಕಲನ ಮಾಡಿರುವ ವಿ ಪಿ ಕೃಷ್ಣನ್ 
ಮತ್ತು ಇವರ ಪ್ರತಿಭೆಯನ್ನೆಲ್ಲ ಸರಿಯಾಗಿ ಕಲೆಹಾಕಿದ ನಿರ್ಮಾಪಕ ಪಾರಿಜಾತ ಪಿಕ್ಚರ್ಸ್ ನ ಟಿ ಏನ್ ಶ್ರೀನಿವಾಸನ್ 
ಒಂದು ಸುಂದರಕಥೆಯನ್ನು ಅಷ್ಟೇ ಮಧುರವಾದ ಸಂಭಾಷಣೆಯನ್ನು ಬರೆದ ಲೇಖಕಿ ತ್ರಿವೇಣಿ 
ಈ ಸುಂದರ ಕಲಾವಿದರ ದಂಡಿನ ಹಡಗನ್ನು ಸಮರ್ಥವಾಗಿ ಮುನ್ನೆಡೆಸಿದ ನಾವಿಕರ ಕಪ್ತಾನ ಪುಟ್ಟಣ್ಣ ಕಣಗಾಲ್ 
ಇವರೆಲ್ಲರ ಸಮಾಗಮ ೧೯೬೬ರ ಅಮೋಘ ಕೊಡುಗೆ ಬೆಳ್ಳಿ ಮೋಡ.  

ಚಿತ್ರದ ಆರಂಭಿಕ ದೃಶ್ಯದಲ್ಲಿ ಕಥಾ ಲೇಖಕಿ ದಿವಗಂತ ತ್ರಿವೇಣಿ ಅವರಿಗೆ ನಮನ ಸಲ್ಲಿಸುತ್ತಲೇ.. ತಾವೊಬ್ಬ ವಿಭಿನ್ನ ಹಾದಿ ತುಳಿಯುವವರು ಎನ್ನುವುದನ್ನು ತೋರುತ್ತಾರೆ. ಇದು ಒಬ್ಬ ನಿರ್ದೇಶಕ ತಾನು ಬಳಸಿಕೊಳ್ಳುವ ಕಥಾ ಲೇಖಕ/ಕಿ ಅವರಿಗೆ ಕೊಡುವ ಉತ್ಕೃಷ್ಟ ಸನ್ಮಾನ ಎನ್ನಬಹುದು.

"ಸರ್ ನೀವು ಎಲ್ಲಿಂದ ಬಂದ್ರಿ ಎಲ್ಲಿಗೆ ಹೋಗುತ್ತಿದ್ದೀರಿ?"
ಏನಯ್ಯ ಮಹಾತ್ಮರಿಗೆ ಅರಿವಾಗದ ಪ್ರಶ್ನೆಯನ್ನು ಸಾಮಾನ್ಯನಾದ ನನಗೆ ಕೇಳುತಿದ್ದೀಯ?"

ಈ ಸಂಭಾಷಣೆ ದ್ವಾರಕೀಶ್ ಮತ್ತು ನಾಯಕ ಕಲ್ಯಾಣ್ ಕುಮಾರ್ ಮಧ್ಯೆ ಆರಂಭಿಕ ದೃಶ್ಯದಲ್ಲಿ ಸಿಗುತ್ತದೆ. ಚಿತ್ರದ ಆರಂಭದಲ್ಲೇ ಚಿತ್ರದ ನಾಯಕ ತಾನೂ ಒಬ್ಬ ಸಾಮಾನ್ಯ, ರಾಗ ಭಾವ ದ್ವೇಷಗಳನ್ನು ಒಳಗೊಂಡವ ಎನ್ನುವ ಸಂದೇಶ ಸಾರುತ್ತದೆ.

ಹಾದಿಯಲ್ಲಿ ಹೋಗುತ್ತಾ ಹೋಗುತ್ತಾ ಕರುನಾಡಿನ ಸುಂದರ ಸ್ಥಳ ಚಿಕಮಗಳೂರಿನ ಪ್ರಕೃತಿ ಮಾತೆಯ ಸೌಂದರ್ಯವನ್ನು ಕಪ್ಪು ಬಿಳುಪಿನಲ್ಲಿ ನೋಡುವುದೇ ಒಂದು ಭಾಗ್ಯ.

ಸಂಭಾಷಣೆ ಎಂದು ತೋರಿಸುವ ಫಲಕದಲ್ಲಿ ಕಥಾ ಲೇಖಕಿ ತ್ರಿವೇಣಿಯವರ ಹೆಸರು ಜೊತೆಗೆ ಅರ್ ಏನ್ ಜಯಗೋಪಾಲ್ ಅವರ ಹೆಸರು ತೋರುವುದು ತಾನೊಬ್ಬ ವಸ್ತು ನಿಷ್ಠ ನಿರ್ದೇಶಕ ಎನ್ನುವುದನ್ನು ಸಾರಿ ಸಾರಿ ಹೇಳುತ್ತದೆ.

ಹಾಸ್ಯ ಬ್ರಹ್ಮ ಬಾಲಕೃಷ್ಣ, ದ್ವಾರಕೀಶ್, ಕುಳ್ಳಿ ಜಯ, ಗಣಪತಿ ಭಟ್ಟ ಅವರ ಮಧ್ಯೆ ನಡೆಯುವ ದೃಶ್ಯಗಳು ಕಥೆಯನ್ನು ಅಡ್ಡಾದಿಡ್ಡಿ ಓಡಿಸದೇ ಕಚಗುಳಿ ಇಡುವ ದೃಶ್ಯಗಳನ್ನು ಸೇರಿಸಿರುವುದರಲ್ಲಿ ನಿರ್ದೇಶಕನ ಜಾಣ್ಮೆ ಕಾಣುತ್ತದೆ.

"ನಾ ನಿಮ್ಮ ವಯಸ್ಸಿನಲ್ಲಿದ್ದಾಗ ತಲೆಯ ಮೇಲೆ ಹಾಕಿದ ನೀರು ಕಾಲಿಂದ ಬಿಸಿನೀರಾಗಿ ಹರಿದು ಹೋಗುತ್ತಿತ್ತು. ನನ್ನ ಮೈ ಕಂಚು ಕಂಚು" ಎನ್ನುವ ಬಾಲಣ್ಣ

"ಒಹ್ ಅದಕ್ಕೆ ಕಂಬದಿಂದ ಬರದೆ ಕಾಫಿ ಬೀಜದಿಂದ ಬಂದೆ ಅಲ್ವೇ ಮಾವಯ್ಯ" ಎನ್ನುವ ದ್ವಾರಕೀಶ್

"ಸತಿ ಸಾವಿತ್ರಿಯ ಗಂಡ ಡ್ರೈವರ್ ಆಗಿರಲಿಲ್ಲ" ಎನ್ನುವ ಕುಳ್ಳಿ ಜಯ

 ಈ ಎಲ್ಲಾ ಸಂಭಾಷಣೆಗಳು ನೋಡುಗರಿಗೆ ಒಂದು ವೇದಿಕೆಯನ್ನು ಸಿದ್ಧ ಮಾಡಿಕೊಡುತ್ತಾ ಹೋಗುತ್ತದೆ.

ಭಾವುಕ ದೃಶ್ಯಗಳ ಮಧ್ಯೆ ಈ ರೀತಿಯ ಕಚಗುಳಿ ದೃಶ್ಯಗಳು ಒಂದು ಭಿನ್ನ ಅನುಭವ ಕೊಡುತ್ತದೆ. ಭಾವದ ಏರಿಳಿತದಲ್ಲಿ ಪ್ರೇಕ್ಷಕ ಕಳೆದು ಹೋಗದೆ ಇರುವುದನ್ನು ತಡೆಯುತ್ತದೆ.

ನಾಯಕ ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದೇಶಕ್ಕೆ ಹೋಗಲು ಸಹಾಯ ಹಸ್ತ ಕೇಳಲು ಬರುತ್ತಾನೆ. ಕಾರಣಾಂತರಗಳಿಂದ ಬೆಳ್ಳಿಮೋಡದ ಮಾಲೀಕನ ಸಮಿತಿಗೆ ಸಹಾಯ ಮಾಡಲು ಆಗದ ಕಾರಣ ಮುಂದಿನ ವರ್ಷ ಹೋಗಬಹುದು ಎನ್ನುವ ಭರವಸೆ ನೀಡುತ್ತಾನೆ.

ಅಷ್ಟರಲ್ಲಿ ಮಾಲೀಕನ ಮಡದಿ ತನ್ನ ಮಗಳಿಗೆ ನಾಯಕನ್ನು ಕೊಟ್ಟು ಮದುವೆ ಮಾಡಿ.. ತಮ್ಮ ಸ್ವಂತ ಖರ್ಚಿನಲ್ಲಿ ವಿದೇಶಕ್ಕೆ ಕಳಿಸಬಹುದು ಎನ್ನುವ ಬಯಕೆ ವ್ಯಕ್ತಪಡಿಸುತ್ತಾಳೆ. ಮೊದಲು ಒಪ್ಪದ ಮಾಲೀಕ ನಂತರ ವಿಧಿಯಿಲ್ಲದೇ ಒಪ್ಪಿಕೊಂಡು ನಾಯಕ ನಾಯಕಿಯ ನಿಶ್ಚಿತಾರ್ಥ ಏರ್ಪಡಿಸಿ ವಿದ್ಯಾಭ್ಯಾಸ ಮುಗಿದ ಮೇಲೆ ಮದುವೆ ಎಂದು 
ನಿರ್ಧಾರವಾಗುತ್ತದೆ.

ಈ ದೃಶ್ಯದಲ್ಲಿ ನಾಯಕನ ತಂದೆ ತಾಯಿಯ ದುರಾಸೆ, ದುರಾಲೋಚನೆ ಬಯಲಿಗೆ ಬರುತ್ತೆ. ಬೆಳ್ಳಿ ಮೋಡದ ಆಸ್ತಿಗೆ ನಾಯಕಿಯೇ ಹಕ್ಕು ಭಾದ್ಯಳು  ಎಂದು ಅಷ್ಟೇನೂ ಸುಂದರಿಯಲ್ಲದ ನಾಯಕಿಯನ್ನು ತಮ್ಮ ಸೊಸೆ ಮಾಡಿಕೊಳ್ಳಲು ಹವಣಿಸುತ್ತಾರೆ.

ಅನೀರೀಕ್ಷಿತ ಘಟನೆಯಲ್ಲಿ ಬೆಳ್ಳಿಮೋಡದ ಆಸ್ತಿಗೆ ಇನ್ನೊಬ್ಬ ಹಕ್ಕುದಾರ ಬರುತ್ತಾನೆ. ಮಾಲೀಕನ ಹೆಂಡತಿಗೆ ಗಂಡು ಮಗುವಾಗಿ, ನಾಯಕನ ತಂದೆ ತಾಯಿಯ ಆಸೆ ಮಂಜಿನ ಹನಿಯಂತೆ ಕರಗಿ ಹೋಗುತ್ತದೆ. ನಂತರ ನಾಯಕ ಬರೆದ ಪತ್ರದಲ್ಲಿ ಅವನ ದುರಾಸೆ ಕೂಡ ಸೂಕ್ಷ್ಮವಾಗಿ ಬಯಲಿಗೆ ಬರುತ್ತದೆ. ಈ ನಡುವೆ ಮಾಲೀಕನ ಹೆಂಡತಿ ಮಗುವಿನ ಜವಾಬ್ದಾರಿಯನ್ನು ತನ್ನ ಗಂಡ ಹಾಗೂ ಮಗಳಿಗೆ ಕೊಟ್ಟು ಕೊನೆಯುಸಿರು ಬಿಡುತ್ತಾಳೆ.

ವಿದ್ಯಾಭ್ಯಾಸ ಮುಗಿಸಿದ ನಾಯಕ, ಮರಳಿ ಬಂದಾಗ ಹಿಂದಿನ  ಪ್ರೀತಿ ವಿಶ್ವಾಸ ಮಮಕಾರ ಯಾವುದೂ ಅವನಲ್ಲಿ ಕಾಣುವುದಿಲ್ಲ. ಎಲ್ಲಾ ವಿಷಯ ಬಯಲಾದಾಗ ನಾಯಕಿಗೆ ಮದುವೆಯಲ್ಲಿ ಆಸಕ್ತಿಯೇ ಇರುವುದಿಲ್ಲ. ಹತಾಶನಾದ ನಾಯಕ ಕಾಲು ಜಾರಿ ಕಮರಿಗೆ ಬಿದ್ದು ನಾಯಕಿಯ ಶುಶ್ರೂಷೆಯಲ್ಲಿ ಚೇತರಿಸಿಕೊಳ್ಳುವಾಗ ಅವಳ ನಿಸ್ವಾರ್ಥ ಸೇವೆಯನ್ನು ಕಂಡು ತನ್ನ ದುರಾಸೆಗೆ ನಾಚಿಕೆ ಪಟ್ಟುಕೊಳ್ಳುತ್ತಾ ಪ್ರೀತಿಯ ಮೊಳಕೆ ಒಡೆಯಬಹುದು ಎನ್ನುವ ಆಶಾ ಭಾವಕ್ಕೆ ನಾಯಕಿ "ನೀವು ರೋಗಿ ಎನ್ನುವ ಭಾವದಲ್ಲಿ ನಾ ನಿಮ್ಮನ್ನು ಆರೈಕೆ ಮಾಡಿದೆ" ಎಂದು ತಣ್ಣೀರು ಸುರಿಯುತ್ತಾಳೆ. ಅಲ್ಲಿಗೆ ನಾಯಕನ ಆಸೆ ಕರಗಿ ಹೋಗುತ್ತದೆ.

ಈ ಸರಳ ಕಥೆಯನ್ನು ಸುಂದರವಾಗಿ ವಿಹಂಗಮ ಪ್ರಕೃತಿ ಮಡಿಲಲ್ಲಿ ಚಿತ್ರೀಕರಿಸಿ ಕಲಾವಿದರಿಂದ ಪಾತ್ರಕ್ಕೆ ಎಷ್ಟು ಬೇಕೊ ಅಷ್ಟು ಭಾವವನ್ನು ಮಾತ್ರ ಹೊರಹೊಮ್ಮಿಸಿ ಒಂದು ಸುಂದರ ಕಲಾಕೃತಿಯನ್ನು ಕೊಟ್ಟಿದ್ದಾರೆ ನಮ್ಮೆಲ್ಲರ ಹೆಮ್ಮೆಯ ನಿರ್ದೇಶಕ ಪುಟ್ಟಣ್ಣ ಕಣಗಾಲ್.

ಅವರ ಕುಸುರಿ ಕೆಲಸಕ್ಕೆ ಸಾಕ್ಷಿಯಾದ ಅನೇಕ ದೃಶ್ಯಗಳು ಕಾಣಸಿಗುತ್ತವೆ ಹಾಗೆಯೇ ಬೆಳೆಯುವ ಪೈರು ಮೊಳಕೆಯಲ್ಲಿ ಎನ್ನುವ ಗಾದೆಯಂತೆ ಮುಂದಿನ ಅಮೋಘ ಕೊಡುಗೆ ನೀಡುವ ಚಿತ್ರಗಳ ಬಗ್ಗೆ ಸೂಚನೆ ಕೊಡುತ್ತಾರೆ.
  1. ಮಲೆನಾಡಿನಲ್ಲಿ ಹೊಟ್ಟೆ ಪಾಡಿಗೆ ಚತುರತೆಯಿಂದ ಒಂದಷ್ಟು ಕಾಸು ಮಾಡಿಕೊಳ್ಳುವ ಬಸ್ ನಿಲ್ದಾಣದ ಕೂಲಿಯ ಚಿಕ್ಕ ಪಾತ್ರ ಸೊಗಸಾಗಿದೆ     
  2. ದ್ವಾರಕೀಶ್,  ಬಾಲಣ್ಣ, ಕುಳ್ಳಿ ಜಯ ಅವರ ದೃಶ್ಯಗಳು ತಾನು ಹಾಸ್ಯ ದೃಶ್ಯಗಳಿಗೂ ಸೈ ಎಂದು ತೋರಿಸುತ್ತಾರೆ
  3. ನಾಯಕಿಯ ಭಾವಚಿತ್ರ ನೋಡುತ್ತಲೇ ಅಕಸ್ಮಾತ್ ಕೈಜಾರಿ ಆ ಚಿತ್ರದ ಗಾಜು ಒಡೆದು ಹೋದಾಗ, ತಣ್ಣನೆ ಭಾವ ವ್ಯಕ್ತ ಪಡಿಸುವ ನಾಯಕಿಯ ಸಂಭಾಷಣೆ ಸುಂದರ ಎನಿಸುತ್ತದೆ. ಮತ್ತು ಚಿತ್ರದ ಅಂತ್ಯದ ಬಗ್ಗೆ ಒಂದು ಸುಳಿವು ನೀಡುತ್ತಾರೆ. 
  4. ನಾಯಕ ಮತ್ತು ನಾಯಕಿಯ ಪ್ರೇಮ ನಿವೇದನೆ, ಆ ನವಿರು ಭಾವ ಬೆಟ್ಟದ ಮೇಲಿನ ಒಂಟಿ ಮರದ ಸುತ್ತ ಸುಂದರವಾಗಿ ಚಿತ್ರೀಕರಿಸಿದ್ದಾರೆ 
  5. "ಮೂಡಲ ಮನೆಯ ಮುತ್ತಿನ ನೀರನು"  ಹೆಮ್ಮೆಯ ಕವಿ  ದ ರಾ ಬೇಂದ್ರೆಯವರ ಲೇಖನಿಯಲ್ಲಿ ಮೂಡಿದ ಹಾಡನ್ನು ಅಷ್ಟೇ ಸುಂದರವಾಗಿ ಚಿತ್ರಿಸಲು ದಿನಗಟ್ಟಲೆ ಅಲೆದಾಡಿ ಸುಂದರ ಪ್ರದೇಶಗಳಲ್ಲಿ ಚಿತ್ರೀಕರಿಸಿದ್ದು ಅವರ ಒಳಗಿನ ಕಲಾವಿದ ನಿರ್ದೇಶಕನ ಅವತಾರ ಎನ್ನಬಹುದು. 
  6. ಅಪ್ಪ ತನ್ನ ಮಗಳಿಗೆ ಮತ್ತೆ ತಾನು ಅಪ್ಪನಾಗುತ್ತಿರುವ ಸಂಕೋಚದ ವಿಷಯವನ್ನು ಒಂದು ಹಾಸ್ಯ ರೂಪದಲ್ಲಿ ಹೇಳಿ ನಂತರ ಮಗಳಿಗೆ "ಇನ್ನು ಮೇಲೆ ನೀನು ಅವಳ ಮಗಳಲ್ಲಮ್ಮ... ಅವಳ ತಾಯಿ" ಎನ್ನುವ ದೃಶ್ಯ ಸೂಪರ್
  7. ಬೆಳ್ಳಿ ಮೋಡದ ಮಾಲೀಕ ಮತ್ತು ಕೊನೆಯುಸಿರು ಎಳೆಯುತ್ತಿರುವ ಮಡದಿಯ ನಡುವೆ ನಡೆಯುವ ಮೊದಲ ಪ್ರೇಮ ಪತ್ರದ ವಾಚನ, ಮತ್ತು ಅದನ್ನು ನೆನೆದು ಆ ದುಃಖದ ಸನ್ನಿವೇಶದಲ್ಲೂ ದಂಪತಿಗಳು ನಗುವ, ನೆನೆಸಿಕೊಳ್ಳುವ ದೃಶ್ಯ ಒಂದು ಕಡೆಯಲ್ಲಿ ಅವರಿಬ್ಬರ ಪ್ರೇಮ ಪ್ರೀತಿಯನ್ನು ಕಂಡು ಬೀಗಿದರೆ ಇನ್ನೊಂದೆಡೆ ಜವರಾಯನ  ಬಾಗಿಲಿಗೆ ತೆರೆಳಲು ಸಿದ್ಧವಾಗುವುದು ಕಣ್ಣೀರು ತರಿಸುತ್ತದೆ. ನಿರ್ದೇಶನ ಚಾತುರ್ಯ ಈ ದೃಶ್ಯದಲ್ಲಿ ಕಾಡುತ್ತದೆ. 
  8. ನಾಯಕಿ ತಾನೇ ಮದುವೆಗೆ ನಿರಾಕರಿಸುತ್ತೇನೆ ಎಂದು ಹೇಳುವ ದೃಶ್ಯ ನಾಯಕ ನಾಯಕಿ ಮಧ್ಯೆ ನಡೆಯುವ ಭಾವ ಸಂಘರ್ಷ, ನಾಯಕ ಕೂಗಾಡಿದರೂ ನಾಯಕಿಯ ಪ್ರಶಾಂತತೆ, ಸಂಭಾಷಣೆ ಹೇಳುವ ಧಾಟಿ ಅಬ್ಬಾ ಎನಿಸುತ್ತದೆ 
  9. ನಾಯಕ ಮತ್ತೆ ನಾಯಕಿಯ ಪ್ರೀತಿಗೆ ಬಿದ್ದು, ದ್ವೇಷಿಸುತ್ತಿದ್ದ ಅವಳ ತಮ್ಮನನ್ನು ಮುದ್ದಾಡುವ ದೃಶ್ಯ, ಮತ್ತು ನಾಯಕಿ ನಾಯಕನನ್ನು ಶುಶ್ರೂಷೆ ಮಾಡುವ ದೃಶ್ಯಗಳು ಎಲ್ಲೂ ಅತಿರೇಕಕ್ಕೆ ಹೋಗದೆ ನೈಜತೆ ಮೂಡುವಂತೆ ಮಾಡಿರುವುದು ನಿರ್ದೇಶನ ತಾಕತ್.
  10. ಕಡೆಯ ದೃಶ್ಯದಲ್ಲಿ ನಾಯಕಿ ಹೇಳುವ "ಮುದುಕಿಯ ಬದುಕಿಗೆ ಯೌವನ ಒಂದು ನೆನಪು ಮಾತ್ರ.... ಬೆಳ್ಳಿ ಕರಗಿತು ಮೋಡ ಉಳಿಯಿತು" ಎಂದು ಹೇಳಿ ತಮ್ಮ ಪ್ರೇಮದ ಸಂಕೇತ ಪ್ರತಿನಿಧಿಸುತ್ತಿದ್ದ ಮರವನ್ನು ಕಡಿಯಲು ಮುಂದಾಗುವ ದೃಶ್ಯ  ಮನಸಲ್ಲಿ ಬಹುಕಾಲ ಕಾಡುತ್ತದೆ.  ನಿರಾಶನಾದ ನಾಯಕಿಯ ಅಪ್ಪ ಬೇಸರದಿಂದ ನಿಲ್ಲುವುದು , ನಾಯಕಿಯ ಪುಟ್ಟ ತಮ್ಮ ಇಬ್ಬರ ಜಗಳ ನಿಲ್ಲಿಸಲು ಕೈ ಚಾಚಿ ನಿಲ್ಲುವುದು, ನಾಯಕ ಮರವನ್ನು ಕಡಿಯ ಬೇಡ ಎಂದು ತಡೆಯಲು ಹೋಗುವುದು, ನಾಯಕಿ ಮುಖದಲ್ಲಿ ಹತಾಶೆ ತೋರುತ್ತಾ ಕೊಡಲಿ ಎತ್ತಿ ನಿಲ್ಲುವುದು.. ಇದು ನಿಜಕ್ಕೂ ಬೆಳ್ಳಿ ಮೋಡದ ಹೈ-ಲೈಟ್ ದೃಶ್ಯ ಎನ್ನಬಹುದು. ನೂರಾರು ಸಾಲುಗಳಲ್ಲಿ ಹೇಳುವುದನ್ನು ಒಂದು ದೃಶ್ಯದಲ್ಲಿ ತೋರುವ ಜಾಣ್ಮೆ ನಮ್ಮ ಹೆಮ್ಮೆಯ ನಿರ್ದೇಶನ ಮೊದಲ ಚಿತ್ರದಲ್ಲಿ ತೋರಿದ್ದಾರೆ. 
  • ನಾಯಕಿಯಾಗಿ ಕಲ್ಪನಾ ಹದಬರಿತ, ಯಾವುದೇ ಅತಿರೇಕಕ್ಕೆ ಹೋಗದೆ, ಪ್ರಶಾಂತ ಅಭಿನಯ. ಸಂಭಾಷೆಣೆ ಹೇಳುವ ಶೈಲಿ, ಆ ಧ್ವನಿಯಲ್ಲಿ ಏರಿಳಿತ ಎಲ್ಲವೂ  ತಾನೊಬ್ಬ ಅತ್ಯುತ್ತಮ ನಿರ್ದೇಶಕನ ಕೂಸು ಎನ್ನುವುದನ್ನು ಸಾಬೀತು ಪಡಿಸುತ್ತದೆ 
  • ನಾಯಕನಾಗಿ ಕಲ್ಯಾಣ್ ಕುಮಾರ್ ತಮ್ಮ ಉಚ್ಚ್ರಾಯ ಕಾಲದಲ್ಲಿ ಇಂತಹ ಒಂದು ನಕಾರಾತ್ಮಕ ಪಾತ್ರ ಮಾಡಿರುವುದು ಹುಬ್ಬೇರಿಸುವಂತೆ ಮಾಡುತ್ತದೆ. ಆ ತೊಳಲಾಟ, ಹೇಳಲಾಗದೆ ಒಳಗೆ ಒದ್ದಾಡುವ ತಳಮಳ ಎಲ್ಲವೂ  ಅವರ ಅಭಿನಯದಲ್ಲಿ ಸೊಗಸಾಗಿ ಮೂಡಿಬಂದಿದೆ. ಕಪ್ಪು ಬಿಳುಪಿನಲ್ಲಿ ಮನೋಹರವಾಗಿ ಕಾಣುವ ಅವರ ಮುದ್ದು ಮುಖ ಚೆಲುವಾಂತ ಚೆನ್ನಿಗ ಎನ್ನುವಂತೆ ಮಾಡುತ್ತದೆ 
  • ಕರುನಾಡಿನ ಅಪ್ಪ ಎಂದೇ ಹೆಸರಾದ ಕೆ ಎಸ್ ಅಶ್ವಥ್ ಅವರ ಅಭಿನಯದ ಬಗ್ಗೆ ಏನು ಹೇಳಿದರೂ ಕಡಿಮೆ. ಪ್ರತಿ ದೃಶ್ಯದಲ್ಲೂ, ಅದರಲ್ಲೂ ತನ್ನ ಮಡದಿಗೆ ತಮ್ಮ ಮೊದಲ ಪ್ರೇಮ ಪತ್ರವನ್ನು ಓದುವಾಗ ಆ ನವಿರು ಭಾವದ ಸಂಭಾಷಣೆ ಹೇಳುವ ಶೈಲಿ ಅಶ್ವಥ್ ಅವರಿಗೆ ಮಾತ್ರ ಸಾಧ್ಯ. ಅವರ ಮಾತುಗಳು ನಮ್ಮ ಮನೆಯಲ್ಲಿ ಹೇಳುವ ಸಂಭಾಷಣೆಗಳಷ್ಟೇ ಆಪ್ತತೆ ಕಾಣುತ್ತದೆ. 
  • ಕರುನಾಡಿನ ಅಮ್ಮ ಪಂಡರಿ ಬಾಯಿ ಅಶ್ವಥ್ ಅವರಿಗೆ ಪೈಪೋಟಿ ನೀಡುವಂತೆ ಅಭಿನಯಿಸಿದ್ದಾರೆ. ಅದರಲ್ಲೂ ತಾನು ತಾಯಿಯಾಗುತಿದ್ದೇನೆ ಎನ್ನುವಾಗ ಆ ನಾಚಿಕೆ, ಸಂಕೋಚದ ಮುದ್ದೆಯಾಗುವುದು, ತನ್ನ ಬೆಳೆದ ಮಗಳ ಎದುರಲ್ಲಿ ತಾನು ತಾಯಿಯಾಗುತಿದ್ದೇನೆ ಎಂದು ಹೇಳುವುದು, "ನೀನು ತಾಯಿಯಾಗುವ ವಯಸ್ಸಲ್ಲಿ ನಾನು ತಾಯಿಯಾಗುತ್ತಿದ್ದೇನೆ" ಎನ್ನುವಾಗ ಅವರ ತೊಳಲಾಟ.. ಆಹಾ ಎನ್ನಿಸುತ್ತದೆ. ತನ್ನ ಕೊನೆ ಘಳಿಗೆಯಲ್ಲಿ ತನ್ನ ಪತಿಗೆ ಆ ಪ್ರೇಮದ ಪತ್ರವನ್ನು ಓದಿ ಎಂದು, ನಂತರ ಆ ಪತ್ರದ ಪದಗಳ ಭಾವದ ಸುಖವನ್ನು ಮುಖದಲ್ಲಿ ಅರಳಿಸುವ ಪರಿ ನೋಡಿಯೇ ಅನುಭವಿಸಬೇಕು. 
  • ಇನ್ನೂ ಬಾಲಣ್ಣ, ದ್ವಾರಕೀಶ್, ಕುಳ್ಳಿ ಜಯ, ಗಣಪತಿ ಭಟ್ ಇವರ ಸಂಭಾಷಣೆಗಳು, ಚಿಕ್ಕ ಪಾತ್ರದಲ್ಲಿ ನಾಯಕನ ಅಪ್ಪ ಅಮ್ಮನಾಗಿ ಬರುವ  ರಾಘವೇಂದ್ರ ರಾವ್ ಮತ್ತು ಪಾಪಮ್ಮ ಎಲ್ಲರೂ ಅಚ್ಚುಕಟ್ಟಾದ ಅಭಿನಯ ನೀಡಿದ್ದಾರೆ. 
ಹಾಡುಗಳನ್ನು ಚಿತ್ರಿಕರಿಸುವುದರಲ್ಲಿ ಪುಟ್ಟಣ್ಣ ಎತ್ತಿದ ಕೈ. ಆ ವಿರಾಟ್ ಪ್ರತಿಭೆಯ ಅನಾವರಣ ಈ ಚಿತ್ರದಿಂದ ಶುರುವಾಯಿತು. ಆಯ್ದ ಸುಂದರ ತಾಣಗಳಲ್ಲಿ ಕಷ್ಟವಾದರೂ ಸರಿ ಇಲ್ಲಿಯೇ ಚಿತ್ರಿಕರಿಸಬೇಕೆಂಬ ಛಲ ಎಲ್ಲವು ಸೇರಿ ಅಮೋಘ ದೃಶ್ಯಗಳನ್ನು ಕಣ್ಣಿಗೆ ಕಟ್ಟು ಕೊಟ್ಟಿದ್ದಾರೆ. 

"ಮೂಡಲ ಮನೆಯ" ಹಾಡಿನಲ್ಲಿ ಸುಮಧುರ ಸಾಹಿತ್ಯಕ್ಕೆ ಅಷ್ಟೇ ಸುಮಧುರ ಸಂಗೀತ, ದೃಶ್ಯಗಳ ಜೋಡಣೆ ಸೊಗಸಾಗಿದೆ 
"ಇದೆ ನನ್ನ ಉತ್ತರ" ಹಾಡಿನಲ್ಲಿ ನಾಯಕಿಯ ನಾಚಿಕೆ, ನಾಯಕನ ಪ್ರೀತಿ ಸುಂದರ ಹೊರಾಂಗಣದಲ್ಲಿ ಮೂಡಿಬಂದಿದೆ 
"ಬೆಳ್ಳಿ ಮೋಡದ ಅಂಚಿನಿಂದ" ಹಾಡಿನಲ್ಲಿ ತೋರಿಸುವ ತಾಣಗಳು ಸೊಗಸು. 
"ಮುದ್ದಿನ ಗಿಣಿಯೇ ಬಾರೋ" ಮಕ್ಕಳ ಚೇಷ್ಟೆ, ತುಂಟಾಟ ಕಲ್ಪನಾ ಅಭಿನಯ, ಪುಟ್ಟ ಮಗುವಿನ ಮುದ್ದಾದ ನೃತ್ಯ ಸುಂದರವಾಗಿದೆ 
"ಒಡೆಯಿತು ಒಲವಿನ ಕನ್ನಡಿ" ಉತ್ತಮ ಸಾಹಿತ್ಯ,ಸಂಗೀತದಿಂದ ಮನಸ್ಸೆಳೆಯುತ್ತದೆ.  
  
ಸಹಾಯ ಹಸ್ತ ಚಾಚಿದಾಗ ದುರಾಸೆ ಇರಬಾರದು.. ಉತ್ತಮ ಜೀವನಕ್ಕೆ ಸುಂದರ ಮುಖವಲ್ಲ ಸುಂದರ ಮನಸ್ಸು ಮುನ್ನುಡಿ ಎನ್ನುವ ಸಂದೇಶ ಈ ಚಿತ್ರದಲ್ಲಿ ಹೊರಹೊಮ್ಮಿದೆ. ನಂಬಿದ ಸಿದ್ಧಾಂತಗಳು ಜೀವನಕ್ಕೆ ಹೂ ರಾಶಿ ಚೆಲ್ಲಬಲ್ಲದು ಹಾಗೆಯೇ ಮುಳ್ಳು ಕಲ್ಲು ಕೂಡ ಸಿಗುತ್ತದೆ ಅದನ್ನು ದಾಟಿ ಸಾಗಬೇಕು ಎನ್ನುವ ತಾರ್ಕಿಕ  ಸಂದೇಶ ಅನಾವರಣಗೊಂಡಿದೆ. 

ಚಿತ್ರ ಬ್ರಹ್ಮನ ಮೊದಲ ಕಾಣಿಕೆ ಅಮೋಘ. 

ಕನ್ನಡ ನಾಡಿನ ಚಲನಚಿತ್ರ ಇತಿಹಾಸದಲ್ಲಿ ಪವಾಡ ಶುರುಮಾಡಿದ ಈ ನಿರ್ದೇಶಕ ಮಲ್ಲಮ್ಮನ ಪವಾಡದಲ್ಲಿ ನಮಗೆ ಏನು ಜಾದೂ ತೋರಿಸುತ್ತಾರೆ.... ಮುಂದಿನ ಸಂಚಿಕೆಯಲ್ಲಿ ನೋಡೋಣ!  

Sunday, July 7, 2013

ಪುಟ್ಟಣ್ಣ ಕಣಗಾಲ್..............!

ಪುಟ್ಟಣ್ಣ ಕಣಗಾಲ್....  ಪ್ರಾಯಶಃ ಭಾರತೀಯ ಚಿತ್ರರಂಗದಲ್ಲಿ ಮರೆಯಲಾರದ, ಮರೆಯಲಾಗದ, ಮರೆಯಬಾರದ ಹೆಸರು!
ಭಾರತೀಯ ಚಿತ್ರರಂಗ ಶತಮಾನದ ಸಂಭ್ರಮದಲ್ಲಿರುವಾಗ.. ಈ ರಂಗವನ್ನು ಬೆಳಗಿದ, ಬೆಳಗಿಸಿದ ನಿರ್ದೇಶಕರ ಸಾಲಿನಲ್ಲಿ  ನಿಲ್ಲುವ ತಾಕತ್ ಇರುವ ಅನೇಕರಲ್ಲಿ  ಕನ್ನಡಾಂಬೆಯ ಸುಪುತ್ರ ಶ್ರೀ ಪುಟ್ಟಣ್ಣ ಕಣಗಾಲ್ ಅವರ ಹೆಸರು ಮುಂಚೂಣಿಯಲ್ಲಿ ಇರುವುದು. 

ಇದು ನನ್ನ ಸ್ಟೈಲ್ ಎನ್ನುತ್ತಿದ್ದ ಪುಟ್ಟಣ್ಣ 
ಕನ್ನಡ ಚಿತ್ರರಂಗವನ್ನು ಬೆಳಗಿಸಿದ ಅನೇಕ ನಿರ್ದೇಶಕರಲ್ಲಿ ಪ್ರಮುಖರು ಆರ್ ನಾಗೇಂದ್ರರಾಯರು, ಬಿ ಆರ್ ಪಂತುಲು, ಹೆಚ್ ಎಲ್ ಏನ್ ಸಿಂಹ, ಟಿ ವಿ ಸಿಂಗ್ ಠಾಕುರ್, ಶಂಕರ್ ಸಿಂಗ್,  ಹುಣಸೂರು ಕೃಷ್ಣಮೂರ್ತಿ,  ಬಿ ಎಸ್  ರಂಗ, ಕು ರಾ ಸೀತಾರಾಮ ಶಾಸ್ತ್ರಿ, ದೊರೈ ಭಗವಾನ್, ಸಿದ್ದಲಿಂಗಯ್ಯ, ಶಂಕರ್ ನಾಗ್  ಹೀಗೆ ಪಟ್ಟಿಯಲ್ಲಿ ಬರುವ ಅನೇಕರು.  ಇಂತಹ ಘಟಾನುಘಟಿಗಳ ಮಧ್ಯೆ ತನ್ನದೇ ವಿಶಿಷ್ಟ ಛಾಪನ್ನು ಒತ್ತಿ ನಿರ್ದೇಶಕ ಎನ್ನುವ ಸ್ಥಾನಕ್ಕೆ ಘನತೆ, ಗತ್ತು ತಂದು ಕೊಟ್ಟು, ಅನೇಕ ಹಿರಿ-ಕಿರಿ ಕಲಾವಿದರ ಏಳಿಗೆಗೆ ಕಾರಣವಾಗಿ ಹೆಸರು ಪುಟ್ಟಣ್ಣ ಎಂದಾದರೂ ಆ ಸ್ಥಾನಕ್ಕೆ ದೊಡ್ಡಣ್ಣನ ಗಾಂಭೀರ್ಯ ತಂದುಕೊಟ್ಟ ಮಹನೀಯ ನಮ್ಮೆಲ್ಲರ ಹೆಮ್ಮೆಯ ಪುಟ್ಟಣ್ಣ ಕಣಗಾಲ್. 

ನಿರ್ದೇಶಕ ಎನ್ನುವ ಸ್ಥಾನಕ್ಕೆ ಘನತೆ, ಗತ್ತು ತಂದು ಕೊಟ್ಟರು ಪುಟ್ಟಣ್ಣ
ಇಂದು ದೈಹಿಕವಾಗಿ ನಮ್ಮೊಡನೆ  ಇದ್ದಿದ್ದರೆ ಎಂಭತ್ತು ವಸಂತಗಳನ್ನು ಕಂಡು.. ಸಂಪ್ರದಾಯದ ಪ್ರಕಾರ ಸಹಸ್ರ ಚಂದ್ರ ದರ್ಶನದ ಭಾಗ್ಯ ಪಡೆದುಕೊಳ್ಳುತ್ತಿದ್ದರು. ಆದರೆ ಜೀವಿತವಾವದಿಯ ಐವತ್ತೊಂದು ವಸಂತಗಳಲ್ಲಿ ಸಾಧನೆಯ ಶಿಖರವನ್ನು ಮುಟ್ಟಿ ಕಳಶಪ್ರಾಯರಾದರು. ಅನೇಕ ಕಲಾವಿದರ, ತಂತ್ರಜ್ಞರ ಬಾಳಿಗೆ ಸಹಸ್ರ ಚಂದ್ರನ ಬೆಳದಿಂಗಳನ್ನು ತಂದು ಕೊಟ್ಟರು. ಕಲಾವಿದರ, ತಂತ್ರಜ್ಞರ ಸುಪ್ತ ಪ್ರತಿಭೆಯನ್ನು ಹೊರತರಲು ಕಾರಣಕರ್ತರಾದರು. ಹಾಗಾಗಿಯೇ ಅವರ ನಿಧನ ನಂತರವೂ ನಿರ್ದೇಶಕರ ಹೆಸರು ಬಂದಾಗ ಮೊದಲು ಹೆಸರು ಬರುವುದು "ಪುಟ್ಟಣ್ಣ" ಎಂದು. 

ಎಂಭತ್ತರ ದಶಕದ ಆದಿಯಲ್ಲಿ,  ನಾನು ಹತ್ತು ಹನ್ನೊಂದು ವರ್ಷದವನಾಗಿದ್ದಾಗ, ದೂರದರ್ಶನ ಬೆಂಗಳೂರಿಗೆ ಕಾಲಿಟ್ಟ ಸಮಯದಲ್ಲಿ,  ಶನಿವಾರಗಳಂದು ಬಿತ್ತರಗೊಳಿಸುತ್ತಿದ್ದ ಕನ್ನಡ ಚಿತ್ರ ನೋಡುತ್ತಾ ಬೆಳೆದ ನನಗೆ, ಮೊದಲು ಪುಟ್ಟಣ್ಣ ಅವರ ಚಿತ್ರ ನೋಡಿದ್ದು  "ಉಪಾಸನೆ",   ಯಾಕೋ ಕಾಣೆ ಆ ಚಿತ್ರವನ್ನು ದೂರದರ್ಶನದಲ್ಲಿ ಬೇರೊಬ್ಬರ ಮನೆಯ ಕಿಟಕಿಯ ಮೂಲಕ ಇಡಿ ಚಿತ್ರವನ್ನು ನೋಡಿದ್ದು ಇಂದಿಗೂ ಹಸಿರಾಗಿದೆ. ಪ್ರತಿ ಪಾತ್ರ,ಸಂಭಾಷಣೆ, ಹಾಡು, ಚಿತ್ರೀಕರಣ ನಡೆದ ಸ್ಥಳಗಳು ಎಲ್ಲವೂ ಕಣ್ಣಿಗೆ ಕಟ್ಟಿದಂತಿದೆ. ಅಲ್ಲಿಂದ ಶುರುವಾದ ಅವರ ಚಿತ್ರಗಳ ವ್ಯಾಮೋಹ ಇಂದಿಗೂ ನನ್ನನ್ನು ಬೆನ್ನು ಬಿಡದಂತೆ ಕಾಡುತ್ತಿದೆ. 

ಅವರ ಚಿತ್ರಗಳನ್ನು ನೋಡಬೇಕು, ಅದರ ಸಾರವನ್ನು ಅರಿಯಬೇಕು, ಅಳವಡಿಸಿಕೊಳ್ಳಬೇಕು, ಎನ್ನುವ ತವಕ ಶುರುವಾದದ್ದು ಬಾಲ್ಯದ ದಿನಗಳಲ್ಲಿಯೇ. ಪ್ರತಿ ಚಿತ್ರವೂ ಒಂದು ದೃಶ್ಯ ಕಾವ್ಯ, ಮತ್ತು ಪ್ರತಿ ಚಿತ್ರವೂ ಒಂದೊಂದು ಸಮಸ್ಯೆಯ ಮೇಲೆ ಬೆಳಕು , ಉತ್ತಮ ಸಂದೇಶಗಳನ್ನ ಹೊತ್ತು ತರುತ್ತದೆ. ತಾಂತ್ರಿಕವಾಗಿಯೂ ಶ್ರೀಮಂತವಾಗಿದ್ದ ಅವರ ಚಿತ್ರಗಳು ಆ ಕಾಲದ ತಂತ್ರಜ್ಞಾನವನ್ನು  ಉತ್ಕೃಷ್ಟ ಮಟ್ಟದಲ್ಲಿ ಉಪಯೋಗಿಸಿಕೊಂಡ ಅವರ ಪ್ರಚಂಡ ಪ್ರತಿಭೆಗೆ ಅವರೇ ಸಾಟಿ. ಅವರ ಮಾನಸ ಗುರುಗಳಾದ ಶ್ರೀ ಬಿ ಆರ್ ಪಂತುಲು ಅವರ ಗರಡಿಯಲ್ಲಿ ಚೆನ್ನಾಗಿಯೇ ಪಳಗಿ ತನ್ನ ಛಾಪನ್ನು ಮೂಡಿಸಿದ ಸಾಹಸಿ ಪುಟ್ಟಣ್ಣ ಎನ್ನಬಹುದು. 

ಅವರ ನಿರ್ದೇಶನದಲ್ಲಿ ಮೂಡಿಬಂದ ಎಲ್ಲಾ ಇಪ್ಪತ್ತನಾಲ್ಕು ಚಿತ್ರಗಳನ್ನು ನನ್ನ ಅನುಭವದ ಪಾಕದಲ್ಲಿ ನೆನೆಸಿ ನನಗೆ ತಲುಪಿದ ಮಾತುಗಳನ್ನು ನಿಮ್ಮೊಡನೆ ಹಂಚಿಕೊಳ್ಳಬೇಕು ಎನ್ನುವ ಆಸೆ ತುಂಬಾ ವರ್ಷಗಳದ್ದು. ಈಗ ಕಾಲ ಕೂಡಿ ಬಂದಿದೆ :-)

ಅವರ ಚಿತ್ರಗಳನ್ನು ಏಕೆ, ಹೇಗೆ, ನೋಡಬೇಕು ಎನ್ನುವ ನನ್ನ ತವಕಕ್ಕೆ ನೀರೆರೆದಿದ್ದು ನನ್ನ ಪ್ರೀತಿಯ ಸೋದರಮಾವ ಶ್ರೀಕಾಂತ (ರಾಜ).. ಈ ಲೇಖನಗಳ ಮಾಲೆ ಪುಟ್ಟಣ್ಣ ಅವರ ಚರಣ ಕಮಲಗಳಿಗೆ ಹಾಗೂ ಸುಮಾರು ಆರು ವರ್ಷಗಳ ಹಿಂದೆ ನಮ್ಮನ್ನು ಬಿಟ್ಟು ಅಗಲಿದ ನನ್ನ ಸೋದರಮಾವ ರಾಜನ ನೆನಪಿಗೆ ಅರ್ಪಿತ. 

ಪುಟ್ಟಣ್ಣ ಅವರ ಚಿತ್ರಗಳಲ್ಲಿ ಕಥೆಯೇ ನಾಯಕ. ನಂತರ ಸಂಭಾಷಣೆ, ಹಾಡುಗಳು, ಸಾಹಿತ್ಯ, ಸಂಗೀತ, ಗಾಯನ, ಇದರ ಜೊತೆಯಲ್ಲಿ ಪುಟ್ಟಣ್ಣ ಅವರ ಗರಡಿಯಲ್ಲಿ ಪಳಗಿ ಅಭಿನಯಿಸುತ್ತಿದ್ದ ಕಲಾವಿದರು, ಹಾಗೂ ಇಪ್ಪತ್ತ ನಾಲ್ಕು ಚಿತ್ರಗಳಲ್ಲಿ ಕರುನಾಡಿನ ಅನೇಕ ಸುಂದರ ಪ್ರೇಕ್ಷಣೀಯ ಸ್ಥಳಗಳನ್ನು ಪರಿಚಯ,  ಹಾಗೆಯೇ ಅನೇಕ ಹೆಸರಾದ ಸಾಹಿತಿಗಳ, ಅನೇಕ ಬೆಳಕಿಗೆ ಬಾರದ ಸಾಹಿತಿಗಳ ಕಥೆಗಳನ್ನು, ಕವನಗಳನ್ನು ಯಶಸ್ವಿಯಾಗಿ ಬೆಳ್ಳಿ ಪರದೆಗೆ ಅಳವಡಿಸಿದ್ದು, ಕನ್ನಡ ನಾಡು, ನುಡಿಯ ಬಗ್ಗೆ ಅಪರಿಮಿತ ಪ್ರೇಮ ಇವೆಲ್ಲವೂ  ಪುಟ್ಟಣ್ಣ ಕಣಗಾಲ್ ಚಿತ್ರಗಳಲ್ಲಿ ಕಾಣಸಿಗುತ್ತದೆ. 

ಮುಂದಿನ ಹಲವಾರು ಲೇಖನಗಳಲ್ಲಿ ಅವರ ಚಿತ್ರಗಳ ಬಗ್ಗೆ ನನಗೆ ತಿಳಿದ ಜ್ಞಾನದಲ್ಲಿ, ಅರಿವಿಗೆ ಬಂದಷ್ಟು, ಎಟುಕಿದಷ್ಟು ವಿಚಾರಗಳನ್ನು ಬರೆಯುತ್ತಾ ಹೋಗುತ್ತೇನೆ. 

ಪುಟ್ಟಣ್ಣ ನಿರ್ದೇಶನದ ಭಾಗ್ಯವನ್ನು ಕಂಡ ಚಿತ್ರಗಳು ಇಪ್ಪತ್ತನಾಲ್ಕು. ಅನೇಕ ಪ್ರಶಸ್ತಿಗಳ ಕಿರೀಟ ತೊಟ್ಟುಕೊಂಡ ಚಿತ್ರಗಳು ಹಲವಾರು. ಜನಪ್ರಿಯತೆ, ವಾಣಿಜ್ಯವಾಗಿಯೂ ಯಶಸ್ಸು ಕಂಡ ಚಿತ್ರಗಳು ಹಲವಾರು. ಆ ಚಿತ್ರಗಳ ಪಟ್ಟಿ ನಿಮಗಾಗಿ ಇಲ್ಲಿದೆ 

ಬೆಳ್ಳಿ ಮೋಡ (1966)
ಮಲ್ಲಮ್ಮನ ಪವಾಡ (1969)
ಕಪ್ಪು ಬಿಳುಪು (1969)
ಗೆಜ್ಜೆ ಪೂಜೆ (1969)
ಕರುಳಿನ ಕರೆ (1970)
ಶರಪಂಜರ (1971)
ಸಾಕ್ಷಾತ್ಕಾರ (1971)
ನಾಗರ ಹಾವು (1972)
ಎಡಕಲ್ಲು ಗುಡ್ಡ ಮೇಲೆ (1973)
ಉಪಾಸನೆ (1974)
ಶುಭಮಂಗಳ (1975)
ಕಥಾ ಸಂಗಮ (1975)
ಬಿಳಿ ಹೆಂಡ್ತಿ (1975)
ಫಲಿತಾಂಶ (1976)
ಕಾಲೇಜು ರಂಗ (1976)
ಪಡುವಾರಹಳ್ಳಿ ಪಾಂಡವರು (1978)
ಧರ್ಮಸೆರೆ (1979)
ರಂಗನಾಯಕಿ (1981)
ಮಾನಸ ಸರೋವರ (1982)
ಧರಣಿ ಮಂಡಲ ಮಧ್ಯದೊಳಗೆ (1983)
ಋಣ ಮುಕ್ತಳು (1984)
ಅಮೃತ ಘಳಿಗೆ (1984)
ಮಸಣದ ಹೂವು (1984)
ಸಾವಿರ ಮೆಟ್ಟಿಲು (2006) (ನಿರ್ಮಾಪಕರು ಮಧ್ಯದಲ್ಲಿ ನಿಂತು ಹೋಗಿದ್ದ ಚಿತ್ರವನ್ನು ಪೂರ್ಣ ಮಾಡಿ ಬಿಡುಗಡೆ ಮಾಡಿದರು) 

ಬನ್ನಿ ಹೆಮ್ಮೆಯ ಕನ್ನಡಾಂಬೆಯ ಸುಪುತ್ರ, ಕನ್ನಡ ಮಣ್ಣಿನ ಹಿರಿಮೆಯನ್ನು ಭಾರತದ ಉದ್ದಗಲಕ್ಕೂ ಹರಡಿಸಿದ ಪ್ರತಿಭಾ ಪರ್ವತ ಶ್ರೀ ಪುಟ್ಟಣ್ಣ ಕಣಗಾಲ್ ಅವರ ಚಿತ್ರ ಯಾತ್ರೆಯನ್ನು ಶುರುಮಾಡೋಣ!

Saturday, May 25, 2013

ಮಲೆಗಳಲ್ಲಿ ಮದುಮಗಳು - ಒಂದು ಅನುಭವ (2013)

ಕವಿ ಕಲ್ಪನೆಗೆ, ಬರೆಯುವ ಶಕ್ತಿಗೆ ಎಲ್ಲೇ ಇಲ್ಲಾ ಎಂದು ಹೇಳುತ್ತಾರೆ. ಆ ಕಾಲಘಟ್ಟದಲ್ಲಿ ತಮ್ಮ ಘಟದಲ್ಲಿದ್ದ ಕಲ್ಪನೆಗಳನ್ನು ಅಕ್ಷರಕ್ಕೆ ತುಂಬಿ, ಪದಗಳನ್ನು ಎರಕ ಹುಯ್ದು, ಕಾಲಮಾನವೇ ಒಂದು ಸರತಿ ಹಿಂತಿರುಗುವಂತೆ ಚಿತ್ರಿಸುವ ಜಾಣ್ಮೆಯಲ್ಲಿ ಗೆದ್ದರೆ ಕವಿ/ಲೇಖಕ ಸಮರದಲ್ಲಿ ವಿಜಯ ಸಾಧಿಸಿದಂತೆಯೇ ಸರಿ...!

ಅಂಥಹ ಒಂದು ಸುವರ್ಣ ಚೌಕಟ್ಟಿನಲ್ಲಿ ಮಿನುಗಿ, ಮಿಂದು, ಸಾಹಿತ್ಯ ಲೋಕದಲ್ಲಿ ಒಂದು ಉನ್ನತ ಸ್ಥಾನ ಗಳಿಸಿ.. ಹೆಮ್ಮೆಯಿಂದ ಎದೆಯುಬ್ಬಿಸಿನಿಂತ ಕೆಲವು ಕಾದಂಬರಿಗಳು ಓದುಗರ ಮನಸ್ಸಿನಲ್ಲಿ ಸ್ಥಿರವಾಗಿ ಮಾನಸ ಸರೋವರದ ಪಲ್ಲಂಗದಲ್ಲಿ ಪವಡಿಸಿಬಿಟ್ಟಿರುತ್ತವೆ. ಅಂತಹ ಕಥಾನಕಗಳನ್ನು ಮನ ಮುಟ್ಟಿಸುವುದಿರಲಿ... ಮುಟ್ಟುವುದು ಕೆಲವೊಮ್ಮೆ ಆಸಾಧ್ಯ ಎನ್ನಿಸಿಬಿಡುತ್ತದೆ!  

"ಮಲೆಗಳಲ್ಲಿ ಮದುಮಗಳು" ಕರ್ನಾಟಕ ನಾಡಗೀತೆಯಂತೆಯೇ ಜನಪ್ರಿಯವಾದ ಇನ್ನೊಂದು ಮಹಾನ್ ಕೃತಿ ನಮ್ಮ 
ರಾಷ್ಟ್ರಕವಿ ಕುವೆಂಪು ಅವರಿಂದ. 


ಅಂಥಹ ಬೃಹತ್ ಕಾದಂಬರಿಯನ್ನು ಸುಮಾರು ಒಂಭತ್ತು ತಾಸು ಹೊರಾಂಗಣದಲ್ಲಿ  ಆ ಪುಟಗಳನ್ನೂ ಹಾಗೆಯೇ ತೆರೆದಿಡುವುದು ಒಂದು ಸವಾಲೇ ಸರಿ. ಅಂತಹ ಒಂದು ರೋಮಾಂಚನಕಾರಿ ಅನುಭವ ಕೊಡುವ ಕಲಾಗ್ರಾಮದ ಆವರಣದಲ್ಲಿ ಸುಮಾರು ಒಂದು ತಿಂಗಳಿಂದ ಪ್ರದರ್ಶನಗೊಳ್ಳುತ್ತಿರುವ ನಾಟಕ "ಮಲೆಗಳಲ್ಲಿ ಮದುಮಗಳು". 


ಕೇವಲ ನೂರು ರೂಪಾಯಿಗಳಲ್ಲಿ ಒಂದು ೨೦೦-೩೦೦ ವಸಂತಗಳ ಗೆರೆಯನ್ನು ದಾಟಿಸಿ ಕರೆದುಕೊಂಡು ಹೋಗುವ ಒಂದು ಅದ್ಭುತ ಪ್ರದರ್ಶನ. ಅಲ್ಲಿ   ಪ್ರತಿಯೊಂದು ದೃಶ್ಯಗಳನ್ನು ಸಹಜ ಎನ್ನುವಂತೆ ಇರುವ ಅಂಗಣದಲ್ಲಿ ನಟಿಸುವ ಕಲಾವಿದರು, ಅದಕ್ಕೆ ಪೂರಕವಾದ ಸಾಹಿತ್ಯ ಮತ್ತು ಸಂಗೀತ, ನಾವೆಲ್ಲಾ ಆ ಕಾಲಮಾನದ ಯಜಮಾನರ ಜೊತೆಯಲ್ಲಿ ವಿಹರಿಸುತ್ತಿದ್ದೆವೇನೋ ಅನ್ನುವಷ್ಟು ತನ್ಮಯತೆ ಹುಟ್ಟಿಸುವ ನೈಜತೆ ಮನಸನ್ನು ದಂಗುಪಡಿಸುತ್ತದೆ. 

ಕಾರ್ಯಕ್ರಮಕ್ಕೆ ಬಂದವರನ್ನು ಸುಮ್ಮನೆ ಗಮನಿಸಿದರೆ ಸುಮಾರು ಯುವ ಪೀಳಿಗೆಯೇ ಹೆಚ್ಚು ಕಾಣುತ್ತದೆ. ಇದು ನಿಜಕ್ಕೂ ಶ್ಲಾಘನೀಯ ಮತ್ತು ಇದರ ಶ್ರೇಯಸ್ಸು ಈ ನಾಟಕದ ಆಯೋಜಕರಿಗೆ ಸಲ್ಲುತದೆ. 

ನಾಲ್ಕು ವಿವಿಧ ಅಂಗಣದಲ್ಲಿ ನಡೆಯುವ ಈ ಮಹಾನ್ ಕೃತಿಯ ಪ್ರತಿಕೃತಿಯನ್ನು ನಾನು ನನ್ನ ಮಾತಲ್ಲಿ ಹೇಳುವ ಆಸೆ:

೧. ಕೆರೆ ಅಂಗಳ (Bed Area)
ಕೆರೆ, ಮನೆ, ಆವರಣ, ಸೇತುವೆ, ಹೀಗೆ ಒಂದು ಮಲೆನಾಡಿನ ಹಳ್ಳಿಯನ್ನು ದುತ್ತನೆ ಕಣ್ಣ ಮುಂದೆ ನಿಲ್ಲಿಸುವ ಈ ಅಂಗಣದಲ್ಲಿ ನಾಟಕದ ಆರಂಭದ ವಿವಿದ ಮಜಲುಗಳನ್ನು ತೋರುತ್ತ ಹೋಗುತ್ತಾರೆ. ಪ್ರತಿಯೊಂದು ಪಾತ್ರ, ಪ್ರತಿಯೊಂದು ಸಂಭಾಷಣೆ, ಆಗಾಗ ಕಚಗುಳಿ ಕೊಟ್ಟು ನಗಿಸುವ ಒಂದು ಸಾಲಿನ ಸಂಭಾಷಣೆ ಪ್ರೇಕ್ಷಕರ ಕಣ್ಣಿಗೆ ಬಟ್ಟೆ ಕಟ್ಟಿ ಆ ಕಾಲಘಟ್ಟಕ್ಕೆ ಎಳೆದೊಯ್ಯುತ್ತದೆ. ಪ್ರತಿಯೊಂದು ಪಾತ್ರವು ಜೀವಂತ! ಬಡತನದ ಬೇಗೆಯಲ್ಲಿದ್ದರೂ ಜೀವನದ ಸುಂದರ ಕ್ಷಣಗಳನ್ನು ಅನುಭವಿಸುವ, ಜೀವನ ಶೈಲಿ ಹೀಗೆ ಇರಬೇಕು ಎಂದು ಪರಿ ಪರಿಯಾಗಿ ಹಲಸಿನ ಹಣ್ಣನ್ನು ಬಿಡಿಸಿದಂತೆ ತೋರುವ ಚಿತ್ರಣ ಮಕ್ಕಳ ತುಂಟತನ, ಅನುಮಾನ, ಪ್ರೀತಿ ಪ್ರೇಮದ ಭಾವ ಇವೆಲ್ಲಾ ಆಹ್ ಇಂದ ವಾಹ್ ಎನ್ನುವಂತೆ ಮಾಡುತ್ತದೆ.

೨. ಬಯಲು ರಂಗಮಂದಿರ (Open Air Theater Stage)
ಮನಸ್ಸೊಳಗೆ ಇರುವ ಭಾವಾವೇಶ ಬಯಲಿಗೆ ಬಂದು ನಿಲ್ಲುವ ಸುಂದರ ಸನ್ನಿವೇಶಗಳು ಈ ಘಟ್ಟದಲ್ಲಿ ಮೂಡಿಬರುತ್ತದೆ. ಮನಸ್ಸಿನ ವಿಕಾರ ಮುಖಗಳ ಅನಾವರಣ ಆಗುತ್ತಲೇ, ಮನುಷ್ಯನ ವಿಕೃತ ಮನೋಭಾವ ಪರಿಸ್ಥಿತಿಯನ್ನು ಅಣು ಅನುವಾಗಿ ವಿವರಿಸುತ್ತಲೇ, ಮೂಢನಂಬಿಕೆ, ಜಾತಿ ಪದ್ಧತಿ, ಅದನ್ನು ಲಾಭಕ್ಕೆ ಬಳಸುವ ಹಾದಿಗಳು ಮುಂತಾದ ವ್ಯಾಧಿಯ ಬಲೆಯನ್ನು ಹೇಗೆ ನೇಯುತ್ತದೆ ಎಂದು ವಿವರಿಸುತ್ತದೇ. ಹಳ್ಳಿ ಮನೆ, ಊರಿನ ಅಂಗಳ, ಬೆಟ್ಟದ ತುದಿ, ಮುಂತಾದ ಹಳ್ಳಿ ಸೊಗಡನ್ನು ಕಚಕ್ ಕಚಕ್ ಎನ್ನುವಂತೆ ಕ್ಷಿಪ್ರವಾಗಿ ದರ್ಶನ ಕೊಡುತ್ತಾ ಸಾಗುತ್ತದೆ

೩. ಬಿದಿರುಮೆಳೆ (Bamboo groove)
 ಆನೆಗೆ ಪ್ರಿಯವಾದ ಆಹಾರ ಬಿದಿರು. ಆನೆ ನಡೆದದ್ದೇ ದಾರಿ ಅನ್ನುವ ಹಾಗೇ ತಡೆಯಿಲ್ಲದ ಮನುಷ್ಯನ ದಬ್ಬಾಳಿಕೆ, ಅನಾಚಾರ ದೃಶ್ಯಗಳು ಕಾಣ ಸಿಗುತ್ತದೆ. ಅದಕ್ಕೆ ಪೂರಕವಾಗಿ..  ಇಲ್ಲಿನ ದೃಶ್ಯಗಳಲ್ಲಿ ಹಳ್ಳಿ ಶಾಲೆ, ಹೋಟೆಲ್, ಕಾಡಿನ ಹಾದಿಯನ್ನು ನಾಶ ಮಾಡಿ ಊರಿನ ಹಾದಿ ಮಾಡುವ ತವಕ, ಭಾವಿ ಕಟ್ಟೆ, ಹಾವಿನ ದ್ವೇಷದ ಧ್ಯೋತಕವಾದ ಹುತ್ತಗಳು ಕಾಣಸಿಗುತ್ತವೆ. ಮೋಸ, ಕೆಡಕು, ತಟವಟಗಳಿಂದ ಮಾನವ ತಾನು ಹಾಳಗುವುದಲ್ಲದೇ, ಪರಿಸರವನ್ನು ಗಬ್ಬೆಬ್ಬಿಸುವ ಭಾವಗಳು ಕಾಡುತ್ತವೆ.
೪. ಹೊಂಗೆ ರಂಗ (Honge Ranga)
"ಹೊಂಗೆಯ ನೆರಳೇ ಚೆನ್ನ" ಅನ್ನುವ ಅಣ್ಣಾವ್ರ ಶಂಕರ್ ಗುರು ಚಿತ್ರದ ಹಾಡಿನಂತೆ.. ತಾಮಸ ಗುಣಗಳು ತಂಪಾಗುವ ನಿಟ್ಟಿನಲ್ಲಿ ಕೆಲವೊಮ್ಮೆ ಸ್ಪೋಟಿಸುವ ತಪ್ಪು ತಿಳುವಳಿಕೆಗಳು, ತಪ್ಪುಗಳು, ಸಿಟ್ಟು ಸೆಡವುಗಳು ಮನುಷ್ಯನನ್ನು ಹೇಗೆ ದಾರಿ ತಪ್ಪಿಸುತ್ತವೆ ಹಾಗೆಯೇ ಸರಿ ದಾರಿಗೆ ಮರಳಲು ಫಲಕಾರಿಯಾಗುತ್ತವೆ ಎನ್ನುವುದನ್ನು ಗ್ರಾಮ್ಯ ಪರಿಸರ, ಬೆಟ್ಟದ ತುತ್ತ ತುದಿ, ಮಳೆ ಬಂದು ತುಂಬಿ ಹರಿಯುವ ತೊರೆಗಳು, ತಾನು ಬದುಕಲು ನಂಬಿಕೊಂಡ ಜೀವಿಯನ್ನು ತೊರೆಯುವುದು.. ನಂತರ ಪರಿತಪಿಸುವುದು, ತನ್ನ ದಣಿಗೋಸ್ಕರ ತಾನು ಹಾದಿಯಿಂದ ದೂರ ಸರಿಯುವುದು ಇವೆಲ್ಲ ಪುಸ್ತಕದ ಹಾಳೆಗಳು ತೆರೆದಂತೆ ಅವು ತೆಗೆದುಕೊಳ್ಳುತ್ತದೆ ಹಾಗೂ ಒಳಗಿನ ಮನವನ್ನು ಎದುರು ತಂದು ನಿಲ್ಲಿಸುತ್ತದೆ . 
*********************************************************************************
ಪ್ರತಿಯೊಂದು ಪಾತ್ರವೂ ಕಾಡುತ್ತದೆ, ಪ್ರತಿಯೊಂದು ಸಂಭಾಷಣೆಯು ಮನಕ್ಕೆ ತಾಗುತ್ತದೆ, ಅದಕ್ಕೆ ಪೂರಕ ಹಿಮ್ಮೇಳ ಸಂಗೀತ, ಅದರ ಸಾಹಿತ್ಯ ಎಲ್ಲವು ಮನಸ್ಸಿನ ತಂತಿಯನ್ನು ಟಿಂಗ್ ಎಂದು ಮೀಟುತ್ತದೆ. ನನ್ನ ಮನಸ್ಸಿಗೆ ತಾಕಿ, ಈ ಬೃಹತ್ ಕಥಾವಸ್ತುವಿನ ಪ್ರದರ್ಶನಕ್ಕೆ ಬಂದದ್ದು ಸಾರ್ಥಕ ಅನ್ನಿಸುವಂತೆ ಮಾಡಿದ್ದು ಕೆಲವು ಪಾತ್ರಗಳು ಹಾಗು ಸನ್ನಿವೇಶ :

ಹುಲಿಯ (ನಾಯಿ): ನಿಜವಾಗಿಯೂ ಕಣ್ಣಲ್ಲಿ ಬಿಂದು ಜಿನುಗಿಸುವ ಪಾತ್ರ ಇದು. ಈ ಪಾತ್ರಧಾರಿ ನಿಜಕ್ಕೂ ಉತ್ಸಾಹದ ಚಿಲುಮೆ. ತನ್ನ ಪಾತ್ರ ಗೌಣ ಆಗದೆಯೂ... ಮುಖ್ಯ ಪಾತ್ರವಾಗದ ಹಾದಿಯಲ್ಲಿ ಬೆಳೆಯುವ ಈ ಪಾತ್ರ ಕಲಾವಿದನ ಪರಿಶ್ರಮ ಮತ್ತು ಶ್ರದ್ದೆಗೆ ಒಂದು ದಿಕ್ಸೂಚಿ 

ಚಿಂಕಾರ-ಸೆರೆಗಾರ: ಅದ್ಭುತ ಆಂಗೀಕ ಭಾಷೆ, ಭಾಷ ಪ್ರಯೋಗ, ನಡೆಯುವ ಶೈಲಿ ಖಳ ಎಂದರೆ ಹೀಗೆಯೇ ಇರಬೇಕು ಅನ್ನಿಸುವಷ್ಟು ಅಮೋಘ ಅಭಿನಯ 

ಕುಂಟ ಕಾಲಿನ ವೆಂಕಟಪ್ಪ ನಾಯಕ : ಬೊಂಬಾಟ್ ಸಂಭಾಷಣೆ, ಆಂಗೀಕ ಅಭಿನಯ, ಕೃತ್ರಿಮತೆ ಹೀಗೆಯೇ ಇರಬೇಕು ಅನ್ನುವುದನ್ನು ಸಲೀಸಾಗಿ ತೋರುವ ಅಭಿನಯ.. ವಾಹ್ ಅದಕ್ಕೆ ಸಾಟಿಯಿಲ್ಲ. 

ದೇವಿ ಮೈಮೇಲೆ ಬರುವ ಸನ್ನಿವೇಶ.. ರೋಮಾಂಚನ ತಂದಿತು, ಅದಕ್ಕೆ ಎಲ್ಲಾ ಕಲಾವಿದರು ಪಟ್ಟ ಪರಿಶ್ರಮಕ್ಕೆ ತಲೆ ಬಾಗಿ ವಂದಿಸುವೆ.

 ಚಿತ್ರಗಳು

*******************************************************************************
ಹೀಗೆ ಮನಸ್ಸಿಗೆ ಅನ್ನಿಸಿದ ಕೆಲವು ಮಾತುಗಳನ್ನು ಹೇಳಿದ್ದೇನೆ. ಕಥೆ ಬಗ್ಗೆ, ಹಾಗೂ ಅದರ ನೆಲೆಗಟ್ಟಿನ ಬಗ್ಗೆ ಓದುಗರಿಗೆ ಪರಿಚಯವಿದ್ದೆ ಇರುತ್ತೆ.. ಹಾಗಾಗಿ ಅದರ ಒಳ ನೋಟವನ್ನು ಹೇಳ ಹೋಗಿಲ್ಲ. ಸುಮಾರು ಒಂಭತ್ತು-ಹತ್ತು ತಾಸುಗಳನ್ನು ತ್ರಾಸದಾಯಕವಾದರೂ ಉತ್ಕೃಷ್ಟ ಸಂತಸವನ್ನು ಕೊಡುವ, ಹಾಗೂ ಕಲೆ ಕಲಾವಿದರನ್ನು ಹತ್ತಿರದಿಂದ ನೋಡುವ, ಅವರ ಅನುಭವಗಳನ್ನು ಕೇಳುವ ಸುವರ್ಣ ಅವಕಾಶ ಇನ್ನು ಕೆಲವೇ ಕೆಲವು ದಿನಗಳು ಮಾತ್ರ. ಇದೆ ಜೂನ್ ಒಂದಕ್ಕೆ ಕಡೆ ಆಟ ಅಂತ ಹೇಳುತ್ತಿದ್ದಾರೆ. ಎಷ್ಟೋ ಮಂದಿ ಒಂದಕ್ಕಿಂತ ಹೆಚ್ಚು ಭಾರಿ ನೋಡಿರುವುದು ಈ ನಾಟಕವನ್ನು ಕಲಾಗ್ರಮದ ರಂಗದ ಮೇಲೆ ತಂದ  ತಂಡಕ್ಕೆ ಅನಿರ್ವಚನೀಯ ಆನಂದ ತಂದು ಕೊಟ್ಟಿದೆ...!

ಇಡೀ ತಂಡಕ್ಕೆ ನಮ್ಮ ಬಳಗದಿಂದ ಅಭಿನಂದನೆಗಳು ಹಾಗೂ ತಂಡದ ಮುಂದಿನ ಎಲ್ಲಾ ಸಾಹಸಗಳಲ್ಲಿ ಯಶಸ್ಸು ಹೀಗೆ ಸಿಗಲಿ ಎನ್ನುವ ಹಾರೈಕೆ ನಮ್ಮ ತಂಡದಿಂದ!  

ಒಂದು ಸುಂದರ ಮನಸ್ಸಿನ ಸರದಾರರ ಜೊತೆಯಲ್ಲಿ
ಈ ಒಂದು ಸಾಹಸದ ಪರಿಶ್ರಮವನ್ನು ವೀಕ್ಷಿಸಲು ಜೊತೆಯಾದ ಸುಲತ, ಸಂಧ್ಯಾ, ರೂಪ, ಮೇಘನ ಹಾಗೂ ನನನ್ ಮನದನ್ನೆ ಸವಿತಾ ಹಾಗೂ ಮಗಳು ಶೀತಲ್ ಎಲ್ಲರಿಗೂ ಎಷ್ಟು ಧನ್ಯವಾದಗಳನ್ನು ಸಲ್ಲಿಸಿದರು ಸಾಲದು.

Wednesday, April 24, 2013

ರಾಜ್ ಆಸ್ತಾನದಲ್ಲಿ ಅವರು ಅನಭಿಷಿಕ್ತ ಮಹಾರಾಜರೇ! (2013)

ರಾಜ್ ಕಲಾವಿದರಾಗಿ ಯಾಕೆ ಎಲ್ಲರಿಗೂ ಇಷ್ಟವಾಗುತ್ತಾರೆ. ಉತ್ತರ ಹುಡುಕುತ್ತ ಹೊರಟರೆ ಪ್ರಾಯಶಃ ಈ ಭೂಮಿ.... ಮಂಗಳ ಗ್ರಹವಾಗಿಬಿಡುತ್ತೆ ಅನ್ನಿಸುತ್ತೆ. ಯಾಕೆಂದರೆ ಈ ಪ್ರಶ್ನೆಯನ್ನು ಕೇಳುತ್ತಾ ಹೊರಟರೆ ಎಲ್ಲರೂ ಮುಖ ಕೆಂಪಗೆ ಮಾಡಿಕೊಳ್ತಾರೆ. ಇಡಿ ಭೂಮಂಡಲವೇ ಕೆಂಪಾಗಿ.. ಮಂಗಳ ಗ್ರಹದಂತೆ ಆಗುತ್ತದೆ. 

ಇಂದು ಅವರ ಜನುಮ ದಿನ.. ವರ್ಷವೆಲ್ಲಾ ನೆನಪಲ್ಲಿ ಇದ್ದರೂ ಇಂದು ಇನ್ನೊಮ್ಮೆ ಅವರನ್ನು ನೆನೆಸಿಕೊಂಡು ಮೈ ಮನ ಪುಳಕಗೊಳ್ಳುವ ತವಕ ಎಲ್ಲರಲ್ಲೂ ಇರುತ್ತದೆ. ಮಗುವನ್ನು ಎಷ್ಟೇ ಬಾರಿ ಮುದ್ದಿಸಿದರೂ....  ಇನ್ನೊಮ್ಮೆ ಮುದ್ದಿಸೋಣ ಅನ್ನುವ ಬಯಕೆಯಂತೆ ಅಲ್ಲವೇ!

ರಾಜ್ ಆಸ್ತಾನದಲ್ಲಿ ಅವರು ಅನಭಿಷಿಕ್ತ ಮಹಾರಾಜರೇ. 



ಅವರು ಮಹಾರಾಜರಾಗಿ ದರ್ಬಾರ್ ನಲ್ಲಿ ಕೂತಿದ್ದಾಗ ಅವರ ಆಸ್ಥಾನದಲ್ಲಿ ಯಾರು ಯಾರು ಇರಬಹುದು. ಹೀಗೊಂದು ಕಲ್ಪನೆ ನನ್ನ ಕಾಡುತಿತ್ತು. ಆ ಒಂದು ಕಲ್ಪನೆಗೆ ರೆಕ್ಕೆ ಪುಕ್ಕ ಸಿಕ್ಕ ಈ ಕ್ಷಣದಲ್ಲಿ ಮೂಡಿಬಂದ ಲೇಖನ ಇದು. 

ಮಹಾರಾಜ : ಶ್ರೀ ಶ್ರೀ ಮುತ್ತು ರಾಜಕುಮಾರ್ 

ರಾಜ ಮಾತೆ : ಪಂಡರಿಬಾಯಿ 

ರಾಜ ಗುರು : ಕೆ ಎಸ್ ಅಶ್ವತ್ 

ಸಲಹೆ : ಆದ್ವಾನಿ ಲಕ್ಷ್ಮೀದೇವಿ 

ಮಹಾಮಂತ್ರಿಗಳು  : ವರದರಾಜ್ (ತಮ್ಮ) ಹಾಗೂ ಚಿ. ಉದಯಶಂಕರ್ 


ದರ್ಬಾರಿನ ನಿರ್ದೇಶಕರು : ಎಚ್ ಎಲ್ ಎನ್ ಸಿಂಹ 
                                    ಬಿ ಆರ್ ಪಂತುಲು 
                                    ದೊರೈ ಭಗವಾನ್ 
                                    ವಿಜಯ್ 
                                    ಹುಣಸೂರ್ ಕೃಷ್ಣಮೂರ್ತಿ 
                                    ಟಿ ವಿ ಸಿಂಗ್ ಠಾಕೂರ್ 
                                    ಕು ರಾ ಸೀತಾರಾಮ ಶಾಸ್ತ್ರಿ ಇನ್ನೂ ಅನೇಕ 
                                    ಮಹನೀಯರು 

ದೃಶ್ಯಸೆರೆ ಹಿಡಿದವರು  : ಆರ್ ಮಧುಸೂದನ್ 
                                 ಶ್ರೀಕಾಂತ್ 
                                 ಚಿಟ್ಟಿಬಾಬು 
                                 ಡಿ ವಿ ರಾಜಾರಾಮ್ 
                                 ಗೌರಿಶಂಕರ್ ಇನ್ನೂ ಮುಂತಾದವರು     

ಗರಡಿ ಗುರು : ಎಂಪಿ ಶಂಕರ್ 

ಸಂಗೀತ ವಿದ್ವಾಂಸರು : ಉಸ್ತಾದ್ ಬಿಸ್ಮಿಲ್ಲಾ ಖಾನ್ 
                                ಜಿ ಕೆ ವೆಂಕಟೇಶ್ 
                                ರಾಜನ್ ನಾಗೇಂದ್ರ 
                                ಎಂ ರಂಗರಾವ್ 
                                ಉಪೇಂದ್ರ ಕುಮಾರ್ 
                                ಟಿ ಜಿ ಲಿಂಗಪ್ಪ 
                                ವಿಜಯಭಾಸ್ಕರ್ 
                                ಮತ್ತಿತರರು 

ಸೇನಾಪತಿಗಳು : ನಟ ಭೈರವ ವಜ್ರಮುನಿ ಹಾಗೂ ತೂಗುದೀಪ ಶ್ರೀನಿವಾಸ್   

ರಣಕಲಿಗಳು : ಶಕ್ತಿ ಪ್ರಸಾದ್, ನಾಗಪ್ಪ, ದಿನೇಶ್

ವಿಕಟಕವಿಗಳು : ಹಾಸ್ಯ ಬ್ರಹ್ಮ ಬಾಲಣ್ಣ 
                       ಹಾಸ್ಯ ಚಕ್ರವರ್ತಿ ನರಸಿಂಹರಾಜು 
                       ಕುಳ್ಳ ಏಜೆಂಟ್ ದ್ವಾರಕೀಶ್ 
                       ಹಾಸ್ಯ ರಸತಜ್ಞ ಶಿವರಾಂ  

ಪೋಷಕ ವೃಂದದಲ್ಲಿ : ಹೊನ್ನವಳ್ಳಿ ಕೃಷ್ಣ, ಶಾಂತಮ್ಮ, ಪಾಪಮ್ಮ, ಸಂಪತ್, ಶನಿ ಮಹಾದೇವಪ್ಪ, ಅನಂತರಾಮ್ ಮಚ್ಚೇರಿ, ಗೋ ರಾ ಭೀಮರಾವ್, ಎಂ ಎಸ್ ಉಮೇಶ್, ಎಂ ಎಸ್ ಸತ್ಯ, ರಾಮಚಂದ್ರ ಶಾಸ್ತ್ರಿ, ಗಣಪತಿ ಭಟ್, ಅಶ್ವತ್ ನಾರಾಯಣ, ಜೋಕರ್ ಶ್ಯಾಮ್, ಕುಳ್ಳಿ ಜಯ, ರಮಾ ದೇವಿ, ಎಂ ಎನ್ ಲಕ್ಷ್ಮೀದೇವಿ  ಹಾಗೂ ಮತ್ತಿತರರು 

ನೃತ್ಯ ಪಟುಗಳು : ಉಡುಪಿ ಜಯರಾಂ, ದೇವಿ

ಸಾಹಸ: ಶಿವಯ್ಯ, ವಿಜಯ್, ಜೂಡೋ ರತ್ನಂ  
                                                             
ಈ ಪಟ್ಟಿಯಲ್ಲಿ ಇನ್ನೂ ಅನೇಕ ವಿಖ್ಯಾತ ಕಲಾವಿದರ, ಸಭಿಕರ, ಕಲಾ ಪೋಷಕರ ಹೆಸರುಗಳು ಪ್ರಕಟವಾಗಿಲ್ಲ. ಅವರನೆಲ್ಲಾ ಸೇರಿಸಿ ಒಂದು ದೊಡ್ಡ ಒಡ್ಡೋಲಗ ಮಾಡುವ ಅಭಿಲಾಷೆ ಇದೆ. ಎಲ್ಲರ ಮುಖ ಚಿತ್ರಗಳು ಜಗತ್ತಿಗೆ ಪರಿಚಯವಾಗಬೇಕೆಂಬ ಹಂಬಲ ಇದೆ.... ನೋಡೋಣ..ಪ್ರಯತ್ನ ಪಡೋಣ 

ಅಣ್ಣಾವ್ರ ಈ ಹುಟ್ಟು ಹಬ್ಬಕ್ಕೆ ಒಂದು ಕಲಾವಿದರ ಪಟ್ಟಿ.. ಹಾಗೂ ತಾವು ಮರೆಯಲ್ಲಿ ನಿಂತು ಕಲಾ ರತ್ನವನ್ನು ಬೆಳಕಿಗೆ ತಂದು ಹೊಳಪು ಕೊಟ್ಟ ಎಲ್ಲ ಕಲಾ ಮಣಿಗಳಿಗೆ ಈ ಲೇಖನ ಅರ್ಪಿತ!

Friday, April 12, 2013

ಮೈ ನೇಮ್ ಇಸ್ ರಾಜ್ ರಾಜ್ ರಾಜ್! - ಶಂಕರ್ ರಾಜ್ ಗುರು (2013)

ನಿನ್ನೆ ಯುಗಾದಿ ಹಬ್ಬದ ದಿನ ಏನೋ ಆಟವಾಡುತಿದ್ದ  ಮಗಳು ಎರಡು ಕಣ್ಣರಳಿಸಿ "ಅಪ್ಪಾ!" ಎಂದು ಕಿರುಚಿ ಕಣ್ಣು ಹೊಡೆದು ನಕ್ಕಳು.  ಮನಮಡದಿ "ಅದೆಷ್ಟು ಸಲ ಬಂದ್ರು  ಬಾಯಿ ಬಿಟ್ಕೊಂಡು ನೋಡ್ತೀರಾ" ಅಂದ್ಲು. ನನ್ನ ಅಭಿರುಚಿ ಗೊತ್ತಿದ್ದ ಮಗಳು  ಟಿ.ವಿ ಯ ಸೌಂಡ್ ಸ್ವಲ್ಪ ಹೆಚ್ಚಾಗಿಯೇ ಕೊಟ್ಟಳು.

ಕಲಶಂ ಪ್ರತಿಷ್ಟಾಪನ ಮಹೂರ್ತ ಆರಂಭಂ . ಎನ್ನುವಂತೆ ಲೆಕ್ಕವಿಲ್ಲದಷ್ಟು ಭಾರಿ ನೋಡಿದರು ಮತ್ತೊಮ್ಮೆ ನೋಡಲು ಸಿದ್ಧವಾಗಿ ಕೂತೆವು. ನಿನ್ನೆ ಯುಗಾದಿ ಹಬ್ಬದ ದಿನ ಉದಯ ಮೂವೀಸ್ ನಲ್ಲಿ ಅಣ್ಣಾವ್ರ ಶಂಕರ್ ಗುರು ಸಿನಿಮಾ ಬಿತ್ತರಗೊಂಡಿತು.

ನನ್ನ ಮಗಳಿಗೂ ರಾಜ್ ಚಿತ್ರ ಗಳು ಎಂದರೆ ಖುಷಿಯಾಗುತ್ತಿದೆ ಎಂದರೆ ಈ ಕಲಾವಿದ ಎಲ್ಲಾ ತಲೆಮಾರುಗಳಿಗೂ ಸಲ್ಲುವ ಕಲಾವಿದ ಎನ್ನುವುದಕ್ಕೆ ಇದು ಉದಾಹರಣೆ..

ಈ ಲೇಖನವನ್ನು ಇಬ್ಬರೂ "ರಾಜ"ರಿಗೆ ಸಮರ್ಪಿಸುತ್ತಿದ್ದೇನೆ. ಒಂದು ರಾಜಣ್ಣ (ಅಣ್ಣಾವ್ರು)   ..ಇನ್ನೊಂದು ನನ್ನ ಸೋದರ ಮಾವ ರಾಜ (ಇವನ ಹೆಸರೂ - ಶ್ರೀಕಾಂತ್)  (ಇವ ನಮ್ಮನ್ನು ಅಗಲಿ ೫ ವರ್ಷಗಳು ಕಳೆದಿವೆ).

ಶ್ರೀಕಾಂತ್ & ಶ್ರೀಕಾಂತ್!
ನನ್ನ ಸೋದರಮಾವ ರಾಜನ ಸಿನಿಮಾ ಹುಚ್ಚು ಅದರ ಬಗ್ಗೆ ಇನ್ನೊಂದು ಸುಧೀರ್ಘ ಮಾಲಿಕೆಯೇ ಬರೆಯಬೇಕು. ಇವನಿಗೆ "ಶಂಕರ್ ಗುರು" ಸಿನಿಮಾ ಎಷ್ಟು ಹುಚ್ಚು ಹಿಡಿಸಿತ್ತು ಎಂದರೆ.. ಕಳೆದ ಹದಿನೈದು ವರ್ಷಗಳಲ್ಲಿ ಶಂಕರ್ ಗುರು ಚಿತ್ರ ಬೆಂಗಳೂರಿನಲ್ಲಿ ಬಿಡುಗಡೆ ಕಂಡ ಕಡೆಯಲ್ಲೆಲ್ಲಾ ನೋಡಿ ಬಂದಿದ್ದೇವೆ. ಒಂದು ಫೋನ್ "ಶ್ರೀಕಾಂತು.....  ಶಂಕರ್ ಗುರು... ಬೇಗ ಬಂದು ಬಿಡು" ಇಷ್ಟೇ ಅವನು ಹೇಳ್ತಾ ಇದ್ದದ್ದು. ನಾನು ಬಿಟ್ಟ ಕೆಲಸ ಬಿಟ್ಟು ಓಡಿ ಬಿಡುತಿದ್ದೆ.

ತ್ರಿಪಾತ್ರದಲ್ಲಿ ಅಮೋಘ ಅಭಿನಯ! 
ಇನ್ನು ಶಂಕರ್ ಗುರು ಸಿನಿಮಾ... ಪಕ್ಕ ವ್ಯಾಪಾರಿ ಚಿತ್ರವಾದರೂ, ಒಂದು ಜೀವನದಲ್ಲಿ ಇರಬೇಕಾದ ಶಿಸ್ತು, ನೆಡತೆ,       ಮಾತಾ-ಪಿತೃಗಳ ಬಗ್ಗೆ ಗೌರವ, ಪ್ರೀತಿ ಪ್ರೇಮ, ಹಿರಿಯರ ಮೇಲಿನ ಗೌರವ, ಮನಕಲಕುವ ಸಂಭಾಷಣೆಗಳು, ಸಾಹಸ ದೃಶ್ಯಗಳು, ಸುಮಧುರ ಹಾಡುಗಳು ಈ ಚಿತ್ರದಲ್ಲಿದೆ.
  • "ಈಗ ನನ್ನ ಚಾನ್ಸ್" ಎನ್ನುತ್ತಾ ಕುಂಕುಮದ ಭರಣಿ ತೆಗೆದು ಮಡದಿಗೆ ಸಿಂಧೂರ ಇಡುವ ಪರಿ
  • ಕೆಲವೊಮ್ಮೆ ದೇಹಕ್ಕೆ ಈ ರೀತಿಯ ದಂಡನೆ ಅನಿವಾರ್ಯ ಎನ್ನುವ ಮಾತು.. 
  • ರೆಸ್ಟ್ ಬೇಕಾಗಿರೋದು ದೇಹಕ್ಕಲ್ಲ ಮನಸ್ಸಿಗೆ ... ಮನಸ್ಸಿಗೆ.. ಎನ್ನುವ ಸಂಭಾಷಣೆ  
  • ಫೋನ್ ನಲ್ಲಿ "ಜಿಂಕೆಯ ಕಣ್ಣೆ  ಚೆನ್ನಾ ಎನ್ನುತ್ತಾ ಹಾಗೆಯೇ ಅಳುತ್ತಾ ಕುಸಿದು ಕೂರುವ ದೃಶ್ಯ... "ಅಬ್ಬಬ್ಬಾ ಇಷ್ಟು ವರ್ಷಗಳಾದ ಇಂತಹ ಆನಂದ" ಎನ್ನುವಾಗ ಅವರ ಅಭಿನಯ!  
  • "ಅಡ್ರೆಸ್ ಕೇಳ್ತಾ ಇದ್ರೂ.. ನಾನು ಕೊಟ್ಟಿದ್ದೇನೆ.. ನೀವು ಮಿಕ್ಕಿದ್ದು ಕೊಡಿ"
  • "ಓಹ್ ಶಂಕರ್.. ನಾನು ಗೈಡ್ ಮಾಡ್ತೀನಿ ಅಂದೇ... ಕೇಳಲಿಲ್ಲ.. ಯಾರೋ ಮಿಸ್-ಗೈಡ್ ಮಾಡಿದ್ದಾರೆ"
  • "ಮೊದಲು ನಾನು ಹೇಳುವ ಮಾತು ಕೇಳೋ ಕ್ರಿಮಿನಲ್" ಎನ್ನುವ ಗುರು 
  • "ಕಾಶ್ಮೀರದ ಹೆಣ್ಣಿನ ಅಹಂಕಾರ ಇಳಿಸಿ.. ಕನ್ನಡ ನಾಡಿಗೆ ಕರೆತರದಿದ್ದರೆ ನನ್ನ ಹೆಸರು ಗುರು ಅಲ್ಲಾ" ಎಂದು ಎದೆ ತಟ್ಟಿ  ಕೊಳ್ಳುವ ಶೈಲಿ 
  • "ತಾತ.. ಹೀಗೆ ನನ್ನ ಇನ್ನೊಮ್ಮೆ ಹಿಡಿದುಕೊಂಡರೆ ನಾನು ಗೋತಾ"
  • ಸುಮಧುರ ಹಾಡುಗಳು, ಸುಂದರ ಪ್ರದೇಶಗಳಲ್ಲಿ ಚಿತ್ರಿಕರನವಾದ ಸಾಹಸ ದೃಶ್ಯಗಳು, ಮೂರು ಪಾತ್ರಗಳನ್ನೂ ಮಾಡಿದ್ದರೂ ಒಂದು ಪಾತ್ರದ ಛಾಯೆ ಇನ್ನೊಂದು ಪಾತ್ರದ ಮೇಲೆ ಮೂಡದಿರುವುದು.. ಇವೆಲ್ಲ ಕೇವಲ ಅಣ್ಣಾವ್ರಿಗೆ ಮಾತ್ರ ಸಾಧ್ಯ ಎನ್ನಿಸುತ್ತದೆ. ಧ್ವನಿಯಲ್ಲಿ ಏರಿಳಿತ, ಪಾತ್ರಕ್ಕೆ ತಕ್ಕ ಆಂಗಿಕ ಅಭಿನಯ. 
  • ತಾಂತ್ರಿಕವಾಗಿಯೂ ಶ್ರೀಮಂತವಾಗಿದ್ದ ಚಿತ್ರದ ಹೈ ಲೈಟ್ ಎಂದರೆ.. ಅಣ್ಣಾವ್ರ ಪಾತ್ರಗಳು ಒಬ್ಬರನ್ನು ಒಬ್ಬರು ಸಂಧಿಸಿದಾಗ ಭ್ರಮೆಯಲ್ಲ ನಿಜ ಅನ್ನುವಂತೆ ಮೂಡಿಬರುವ ಪಾತ್ರಧಾರಿಗಳ ಜೋಡಣೆ, ಮತ್ತು ಅಭಿನಯ. (ಮಧು ಅವರ ಛಾಯ ಚಿತ್ರಣ)
  • ಶಂಕರ್ ಪಾತ್ರ ಕೋಮಲವಾದ ಬಳ್ಳಿಯ ತರಹ ಇದ್ದರೇ, ಗುರುವಿನ ಪಾತ್ರ ಪಕ್ಕ ತರಲೆ, ನಗು ಬುಗ್ಗೆ ಉಕ್ಕಿಸುವ ಪಾತ್ರ, ಇನ್ನು ಇದಕ್ಕೆಲ್ಲ ಕಳಶಪ್ರಾಯ ಎನ್ನುವಂತೆ ಗಂಭೀರ ರಾಜ್ ಶೇಖರ್ ಪಾತ್ರ
  • ಈ ಚಿತ್ರದ ಬಗ್ಗೆ ಒಂದು ಬೇರೆಯೇ ಲೇಖನ ಬರೆಯುವ ಆಸೆ ಇದೆ.. ಕಾರಣ ನಾನು ತುಂಬಾ ಇಷ್ಟ ಪಟ್ಟು ಪದೇ ಪದೇ  ನೋಡಿದ ಹಲವಾರು ಚಿತ್ರಗಳಲ್ಲಿ ಇದೂ ಒಂದು. 
ಒಂದು ಕ್ಲಾಸಿಕ್ ದೃಶ್ಯ!
ಇಷ್ಟೆಲ್ಲಾ  ಮಾತುಗಳು ಏಕೆ ಅಂದ್ರೆ ಇನ್ನೂರು ಚಿಲ್ಲರೆ ಚಿತ್ರಗಳಲ್ಲಿ ಅಭಿನಯಿಸಿದರೂ, ಹಿರಿಯ ಕಿರಿಯ ಕಲಾವಿದರ ಜೊತೆ ಅಭಿನಯ, ಪಾತ್ರಕ್ಕೆ ಅಗತ್ಯವಿದ್ದಾಗ ಹಿರಿಯ ಕಿರಿಯಕಲಾವಿದ ಎಂದು ನೋಡದೆ.. ಕಾಲು ಮುಟ್ಟಿ  ನಮಸ್ಕರಿಸುವುದು, ಆಲಂಗಿಸಿಕೊಳ್ಳುವುದು, ಇದೆಲ್ಲ ತಲೆಯನ್ನು  ಭುಜದ ಮೇಲೆ ಸದಾ ಹೊತ್ತಿರೋರಿಗೆ ಮಾತ್ರ ಸಾಧ್ಯ. ನಿರ್ದೇಶಕರ, ನಿರ್ಮಾಪಕರ ನಟರಾಗಿದ್ದ ಇವರು ಒಂದು ರತ್ನವೇ...   ಅಂತಹ ಒಂದು ರತ್ನ ನಮ್ಮ ಅಣ್ಣಾವ್ರು. ಕಲಾವಿದ ರಾಜ್ ಎಂದಿಗೂ ಅಮರ! 

ಅವರ ಎಲ್ಲ ಚಿತ್ರಗಳನ್ನು ನೋಡಿ, ಪ್ರತಿಯೊಂದು ಚಿತ್ರದ ಬಗ್ಗೆ ನನಗನಿಸಿದ ಮಾತುಗಳನ್ನು ಬರೆಯುವ ಆಸೆ ಇದೆ. ಇದು  ಅಣ್ಣಾವ್ರಿಗೆ ತೋರುವ ಗೌರವ ಅಷ್ಟೇ ಅಲ್ಲಾ ... ಸಿನಿಮಾ ಹುಚ್ಚನ್ನು ನನಗೂ ದಾಟಿಸಿ, ಸಿನೆಮಾಗಳಲ್ಲಿ ಬರುವ ಒಳ್ಳೆಯ ವಿಚಾರಗಳನ್ನು ಕಲಿಸಿ, ತಿಳಿಸಿ, ಜೀವನದಲ್ಲಿ ಅಳವಡಿಸಿಕೊಳ್ಳಲು ಸಹಾಯ ಮಾಡಿದ ನನ್ನ ಪ್ರೀತಿಯ ಸೋದರಮಾವ ರಾಜನಿಗೂ ಇದು ಒಂದು ನುಡಿ ನಮನವಾಗುತ್ತೆ ಎನ್ನುವ ಒಂದು ಹಂಬಲ .  

ನನ್ನ ಹೃದಯವನ್ನು ಮುಟ್ಟಿದ ಇಬ್ಬರು ಅನಭಿಷಿಕ್ತ "ರಾಜ"ರಿಗೆ ನನ್ನ ಅಕ್ಷರಗಳಲ್ಲಿ ನಮನ ಸಲ್ಲಿಸುವ ಒಂದು ಸಣ್ಣ ಪ್ರಯತ್ನ! 

ಅಣ್ಣಾವ್ರ ಪುಣ್ಯ ತಿಥಿಯ ಈ ಸಮಯದಲ್ಲಿ.. ಸದಾ ನೆನಪಲ್ಲಿ ಇರುವ ಕಲಾವಿದನನ್ನು ಒಮ್ಮೆ ಕಣ್ಣ ಮುಂದೆ ತಂದು                         ನಿಲ್ಲಿಸಿಕೊಳ್ಳುವ ಒಂದು ಪುಟ್ಟ ಪ್ರಯತ್ನ!

Monday, March 25, 2013

ಹಾಲಿನ ಸಮುದ್ರದಲ್ಲಿ ಹಾರಾಡಿದ "ಮೈನಾ" (2010)

ಬಹಳ ತಿಂಗಳುಗಳ ನಂತರ ಒಂದು ಸಿನೆಮಾಕ್ಕೆ ಹೋಗಬೇಕು ಅನ್ನಿಸಿತು. ಮಗಳಿಗೆ ಇವತ್ತು ಪರೀಕ್ಷೆ ಮುಗಿದಿತ್ತು. ಎಲ್ಲಿಗಾದರೂ ಕರೆದುಕೊಂಡು ಹೋಗೋಣ ಅನ್ನಿಸಿ ಸರಿ ದೂದ್ ಸಾಗರ್ ತೋರಿಸುವ ಎಂದು "ಮೈನಾ" ಚಿತ್ರಕ್ಕೆ "ಶ್ರೀವಿತಲ್" ಹೋದೆವು.

ಚಿತ್ರ ಕೃಪೆ - ಅಂತರ್ಜಾಲ 
ಇನ್ನು ಚಿತ್ರದ ಬಗ್ಗೆ ಆಗಲೇ ನೂರಾರು ವಿಮರ್ಶೆಗಳು, ಹೊಗಳಿಕೆಗಳು, ಗಲ್ಲಾಪೆಟ್ಟಿಗೆಯಲ್ಲೂ ಸದ್ದು ಮಾಡಿದ ಚಿತ್ರ ಎಂದು ಬಣ್ಣಿಸಿ ಬರೆದ ಲೇಖನಗಳು ಮೈನಾ ಹಕ್ಕಿಯಂತೆಯೇ ಹಾರಾಡುತ್ತಿದೆ. ನನಗೆ ಅನ್ನಿಸಿದ ಒಂದೆರಡು ಮಾತುಗಳನ್ನ ಬರೆಯೋಣ ಎನ್ನಿಸಿತು. ಹಾಗಾಗಿ ಈ ಬ್ಲಾಗ್ ಲೇಖನ!
ಚಿತ್ರ ಕೃಪೆ - ಅಂತರ್ಜಾಲ 
ಮೈ ನವಿರೇಳಿಸುವಂತಹ ಆರಂಭಿಕ ಸಾಹಸ ದೃಶ್ಯಗಳಿಂದ ಶುರುವಾಗುತ್ತದೆ ಚಿತ್ರ. ನಂತರ ನಿಧಾನಗತಿಯಲ್ಲಿ  ಕಾವೇರಿಸುತ್ತಾ ಸಾಗುತ್ತದೆ. ಈ ರಿಯಾಲಿಟಿ ಶೋಗಳು ಮನುಷ್ಯರನ್ನು ಮಾನವೀಯ ಕಂಪನಗಳಿಂದ ಹೇಗೆ ದೂರ ಒಯ್ಯಬಲ್ಲದು ಎಂದು ಸೂಕ್ಷ್ಮವಾಗಿ ಪರಿಚಯಿಸುತ್ತಾ ಹೋಗುತ್ತದೆ.

ನಂತರ ಶುರುವಾಗುತ್ತದೆ ರಿಯಲ್ ಸಿನಿಮಾ. ದೃಶ್ಯ ಕಾವ್ಯವಾಗಿ ಹರಿದಾಡುತ್ತದೆ. ಪ್ರತಿಯೊಂದು ಸನ್ನಿವೇಶವನ್ನು ಕುಸುರಿಗಾರನ ಕೈಚಳಕದಲ್ಲಿ ಅರಳಿದ ಕಲೆಯಂತೆ ಸಾಗುತ್ತದೆ. ಪಾತ್ರಧಾರಿಗಳು ಕೂಡ ಆ ಪಾತ್ರಗಳಿಗೆ ಎಷ್ಟು ಬೇಕೋ ಅಷ್ಟು ಅಭಿನಯವನ್ನು ಮುದ್ದಾಗಿ ಅಭಿನಯಿಸಿದ್ದಾರೆ.

ಮನಸೆಳೆಯುವ ಅಂಶಗಳು :
  •  ಚೇತನ್ ಅವರ ಆಕರ್ಷಕ ಮೈಕಟ್ಟು, ಓಡುವ ಶೈಲಿ, ಸುಂದರ ನಗು ಚೆಲ್ಲುವ ಕಣ್ಣುಗಳು, ಜಲಪಾತದಂತೆಯೇ ಹರಿದಾಡುವ ತಲೆಗೂದಲು
  • ಬೇಸರವೆನಿಸುವ ತಬಲಾ ನಾಣಿಯ ಅದೇ ಕುಡುಕನ ಶೈಲಿಯ ಮಾತುಗಳು, ಆದರೆ ಬರು ಬರುತ್ತಾ ನಾಯಕನಿಗೆ ಅವನ ಪ್ರೇಮಕ್ಕೆ  ಸಹಾಯ ಮಾಡುವ ಹೃದಯ ಸಿರಿವಂತಿಕೆ (ಬಹುಶಃ ಸಿನಿಮಾದಲ್ಲಿ ಮಾತ್ರ ಸಿಗುತ್ತೆ)
  •  ಸಾಧು ಕೋಕಿಲ ಅವರ ಹಾಸ್ಯ ನಟನೆಗಿಂತ ಹಿನ್ನೆಲೆ ಸಂಗೀತದಲ್ಲಿ ಗಮನ ಸೆಳೆಯುತ್ತಾರೆ (ಕನ್ನಡ ಚಿತ್ರರಂಗದಲ್ಲಿ ಅವರಂತೆ ಪರಿಣಾಮಕಾರಿಯಾಗಿ ಹಿನ್ನೆಲೆ ಸಂಗೀತ ಕೊಡುವರು ಇನ್ನೊಬ್ಬರಿಲ್ಲಾ ಎನ್ನಿಸುತ್ತದೆ)
  • ಪೋಲಿಸ್ ಸಮವಸ್ತ್ರದಲ್ಲಿ (ಮೊದಲಬಾರಿಗೆ) ಮೈ ತುಂಬಾ ಬಟ್ಟೆ ಹಾಕಿಕೊಂಡು ಮುದ್ದಾಗಿ ಕಾಣುವ  ಸುಮನ್ ರಂಗನಾಥ್
  • ಸಾಹಸ ದೃಶ್ಯಗಳು ಗಮನ ಸೆಳೆಯುತ್ತವೆ. 
  • ಚಿತದ ೯೮ % ಭಾಗ ಅತ್ಯುತ್ತಮ ನಿರ್ದೇಶನ ಮಾಡಿರುವ ನಾಗ್ ಶೇಖರ್! (ಇನ್ನುಳಿದ ೨% ಮಾಹಿತಿಗೆ ಲೇಖನದ ಕೊನೆಯಲ್ಲಿ ನೋಡಿ) 

ಹುಚ್ಚೆಬ್ಬಿಸುವ ಅಂಶಗಳು:
ಚಿತ್ರ ಕೃಪೆ - ಅಂತರ್ಜಾಲ
  • ಹಿರಿಯ ತಾರೆ "ಸರಿತಾ" ನಂತರ ಕಣ್ಣುಗಳಲ್ಲೇ ಅಭಿನಯಿಸುವ ನಾಯಕಿ ನಿತ್ಯಾ ಮೆನನ್. ಅವರ ಪಾತ್ರಕ್ಕೆ ಮಾತುಗಳೇ ಬೇಡವಾಗಿತ್ತು ಅನ್ನಿಸುವಷ್ಟು ಅದ್ಭುತವಾಗಿವೆ ಕಣ್ಣಿನ ಅಭಿನಯ 
  • ಕಲರಫುಲ್ ಎನ್ನುವಾಗ ಕಣ್ಣಲ್ಲಿ ಕಾಣುವ ಕಾಂತಿ 
  • ಚಿಕ್ಕ ವಯಸ್ಸಿನಲ್ಲಿ ತೆವಳಲು ಮಜಾ ಎನ್ನಿಸುತ್ತಿತ್ತು.. ತೆವಳುವುದೇ ಜೀವನದ ಅಂತಿಮ ಎನ್ನುವ  ದೃಶ್ಯದಲ್ಲಿ ಕಣ್ಣುಗಳು ಕಾರುವ ಭಾವ 
  • ನನಗೆ ಗಂಡ ಬೇಕು ಎನ್ನುವಾಗ ಕಣ್ಣಲ್ಲಿ ಕಾಣುವ ದೂದ್ ಸಾಗರ!
  • ನಿತ್ಯಾ ಮೆನನ್ ಅವರದು "ಮೈನಾ"ದಲ್ಲಿ "ಮೈ"ನಾ  ತೋರಿಸದೆ ಮನಸನ್ನು ಬಿಚ್ಚಿಟ್ಟ ಒಂದು ಸುಂದರ ಪಾತ್ರ 
ಕುರ್ಚಿಯ ಮೇಲೆ ನಿಲ್ಲಬೇಕು ಎನ್ನಿಸುವ ಅಂಶಗಳು:


ಜಾದುಗಾರ ಸತ್ಯ ಹೆಗಡೆ (ಚಿತ್ರ ಕೃಪೆ - ಅಂತರ್ಜಾಲ )
  • ಈ ಚಿತ್ರದ ನಿಜವಾದ ನಾಯಕ ಛಾಯಾಗ್ರಾಹಕ ಸತ್ಯ ಹೆಗಡೆ. ಕ್ಯಾಮೆರಾಗಳನ್ನು ಎಲ್ಲೆಲ್ಲಿ ಇಟ್ಟಿದ್ದಾರೆ ಎನ್ನುವ ಅನುಮಾನ ಹುಟ್ಟಿಸುವಷ್ಟು ದೃಶ್ಯಗಳು ಶ್ರೀಮಂತವಾಗಿವೆ. 
  • ಸಮುದ್ರ ತೀರದ ದೃಶ್ಯಗಳು, ಕ್ಯಾಮೆರಾಗಳು ಹರಿದಾಡುವ ಸೊಗಸು ನೋಡಿಯೇ ಅನುಭವಿಸಬೇಕು 
  • ಮಳೆ ದೃಶ್ಯಗಳನ್ನು ಬೊಂಬಾಟ್ ಆಗಿ ಚಿತ್ರೀಕರಿಸಿದ್ದಾರೆ
  • ದೂದ್ ಸಾಗರ ಜಲಪಾತದ ಕಣಿವೆ ದೃಶ್ಯಗಳು, ಕ್ಯಾಸಲ್ ರಾಕ್, ಬ್ರಿಗಾಂಜ್ ಘಾಟ್, ರೈಲು ಪಟ್ಟಿಯ ಮಧ್ಯೆ ಬರುವ ಸುರಂಗಗಳು, ಪ್ರತಿಯೊಂದು ದೃಶ್ಯಕಾವ್ಯ. ಇನ್ನೊಮ್ಮೆ ಈ ಚಿತ್ರವನ್ನು ನೋಡಬೇಕೆನಿಸಿದರೆ ಅದು ಸತ್ಯ ಅವರ ಅದ್ಭುತ ಕೆಲಸಕ್ಕೆ. ಜಲಪಾತಗಳನ್ನು ಇಷ್ಟು ಸುಂದರವಾಗಿ ಸೆರೆಹಿಡಿಯಬಹುದು ಎಂದು ತೋರಿಸಿದ್ದಾರೆ. ಅವರ ಶ್ರಮಕ್ಕೆ ಶಿರಬಾಗಿ ನಮಿಸುವೆ 
ತಲೆಕೂದಲು ಕಿತ್ತು ಕೊಳ್ಳಬೇಕು ಅನ್ನಿಸುವ ಅಂಶಗಳು:
  • ಚಿತ್ರದುದ್ದಕ್ಕೂ ಮೈ ಮುಚ್ಚುವ ಪೋಲಿಸ್ ಧಿರುಸಿನಲ್ಲಿ ಸುಂದರವಾಗಿ ಕಾಣುವ ಸುಮನ್ ರಂಗನಾಥ್ ಕಡೆ ದೃಶ್ಯದಲ್ಲಿ ಒಂದು ಸುಂದರ ಹಾಡನ್ನು ಗಬ್ಬೆಬ್ಬಿಸಿ ರಿಮಿಕ್ಸ್ ಅನ್ನುವ ಕೆಟ್ಟ ತಂತ್ರ ಮಾಡಿ ವಯೋವೃದ್ಧರಾದ ಕೆಲ ನಟರನ್ನ ಬಾಯಿ ಬಾಯಿ ಬಿಡುತ್ತಾ ಚಿತ್ರೀಕರಿಸಿರುವ ಹಾಡು. ಅದಕ್ಕೆ  ಹಿರಿಯ ನಟರನ್ನು ಬಳಸಿಕೊಂಡ ರೀತಿ (ಲೋಕನಾಥ್, ಪಾರ್ಥಸಾರಥಿ, ಉಮೇಶ್)... ದೇವರೇ ಕಾಪಾಡಪ್ಪ! 
  • ರಾತಿ ಪೂರ್ತ ಸಂಕಟ ಅನುಭವಿಸಿ ಹೆತ್ತ ಮಗುವನ್ನು ನಾಯಿ ಕಚ್ಚಿಕೊಂಡು ಹೋಯಿತು ಎನ್ನುವ ಹಾಗೆ... ಒಳ್ಳೆ ಅಂತ್ಯ ಕೊಡಬೇಕಾದ ಜಾಗದಲ್ಲಿ @#$@#$@#$!
  • ಈ ಕಡೆ ಪ್ರೇಮ ಕಾವ್ಯವೂ ಆಗದೆ, ಸೇಡಿನ ರಾಜಕಾರಣವೂ ಆಗದ ಎಡಬಿಡಂಗಿಯಂತಹ ಅಂತ್ಯ
  • ಸಂಜು ಮತ್ತು ಗೀತ ದುಖಾಂತ್ಯವಾಯಿತು ಗಲ್ಲಾ  ಪೆಟ್ಟಿಗೆ ತುಂಬಿತ್ತು ಅಂತ   ಈ ಚಿತ್ರದಲ್ಲಿಯೂ  ಬೇಡದ ಅದೇ ದೋರಣೆಯನ್ನು ತೋರಿರುವುದು. 
  • ಒಳ್ಳೆಯ ನಟರನ್ನು ಪಾತ್ರ ಪೋಷಣೆ ಇಲ್ಲದೆ ವ್ಯರ್ಥ ಮಾಡಿರುವುದು (ಸುಹಾಸಿನಿ, ಅನಂತನಾಗ್, ಜೈ ಜಗದೀಶ್)
  • ಶರತ್ ಕುಮಾರ್ ಈ ಪಾತ್ರಕ್ಕೆ ಬೇಕಿತ್ತೆ ಎನ್ನುವ ಗೊಂದಲ ಕಾಡುತ್ತದೆ

ಹೊಡಿ ಬಡಿ ಚಚ್ಚು ಎನ್ನುವ ಸಿದ್ಧ ಸೂತ್ರಗಳ ಮಧ್ಯೆ ನಿಜಕ್ಕೂ ಉಸಿರಾಡಿಸುವ ಸುಂದರ ಚಿತ್ರ. ನೋಡಿ ಅಪರೂಪಕ್ಕೆ ಎಂಬಂತೆ ಬಂದಿರುವ ಒಂದು ಸುಂದರ ಕನ್ನಡ ಚಿತ್ರವನ್ನು ಬೆಂಬಲಿಸಿ. 

Thursday, March 14, 2013

Bangaradha Manushya (1972)

The first in the list features evergreen movie in Kannada movie land “Bangarada Manushya”.  It ran successfully for two years with out a break, a record in Kannada cini industry.  The re-release after a gap of 20 years also ran in to 100 days.

Part I
It was based on a novel by T K Ramarao, directed by Siddalingaiah, Starring Rajkumar, Bharathi, Balakrishna, Vajramuni in the leads.

Rajkumar returns from the city to visit his Sister’s house in the village, he comes to know his brother in law finished duty on the earth, and is on the way to heavenly abode. The moment his sister (played beautifully by Character Artist “Aadhavani Lakshmidevi”), and her children (Two sons played by Srinath, and Vajramuni), and a daughter sees Rajkumar they ran and hug him.  They all knew, he is the one who can bail them out. 

In this scene, she will be having a rich elder Brother (Lokanath), but still her hearts beats for the younger brother who was still studying, but she will have more faith on her younger brother(Rajkumar) than  on elder brother. 

This shows money is not the criteria for love and affection, always the relationship is between heart to heart, but not from wallet to heart.

Part II

When Rajkumar, retrieves the land from the mortgage, he decides to plough on his own.  After the basic rituals, instead of starting to plough, he gently massages the bulls, and then he lifts soil from the land, and prays to the goddess earth to support his noble gesture to save his sister’s family from the troubled waters.

You will fail to choose the winner who is the most innocent, the bulls, the earth, or the Hero.  It brings tears down the cheeks any time I visit this scene.

This teaches, never neglect the hands which lend you the support in the crisis, and also, never forget to seek the divine intervention, which helps you to clear all the path strewn with thorns.

The character of Rajeeva played by Rajkumar was a gem in its own respect.  Sometimes after reading the novel, and watching the movie, you will tempted to debate whether novel was written by keeping Rajkumar in the mind, or Rajkumar was born to portray the character of Rajeeva.  It is like debating whether egg came first or the hen.

Sunday, November 11, 2012

ಮೈನಾವತಿ ಸಿನಿ ಹೃದಯವಂತರ ನೆನಪುಗಳಿಂದ ಮಾಣಿಕ್ಯ (2012)


ಅರವತ್ತು ಎಪ್ಪತ್ತರ ದಶಕದ ಸಿನಿಮಾಗಳನ್ನು ನೋಡಿದವರಿಗೆ ನೋಡಲು ಇಚ್ಚಿಸುವವರಿಗೆ ಪಂಡರಿಬಾಯಿ ಮತ್ತು ಮೈನಾವತಿ ಮರೆಯಲಾರದ ಹೆಸರುಗಳು. 

ಅಕ್ಕ ಪಂಡರಿಬಾಯಿ ಸಾಧು ಸ್ವಭಾವದ ಪಾತ್ರಗಳನ್ನೂ ಮಾಡಿ "ಅಮ್ಮ" ಎಂದರೆ ಹೀಗೆ ಇರುತ್ತಾರೆ ಎನ್ನಿಸುವಷ್ಟು ನೈಜತೆ ಮೆರೆದಿದ್ದಾರೆ

ಆದರೆ ಮೈನಾವತಿ ಘಟವಾಣಿ, ಜಂಭದ ಹುಡುಗಿ, ಹಟಮಾರಿ, ಮತ್ತು ಹಾಸ್ಯ ಪಾತ್ರಗಳಿಂದ ರಂಜಿಸುತಿದ್ದರು. 


ಕನ್ನಡ ಚಿತ್ರಗಳಲ್ಲಿ ಬಾಲಕೃಷ್ಣ ನರಸಿಂಹರಾಜು ಇವರಿಬ್ಬರನ್ನು ಪರದೆಯ ಮೇಲೆ ಹುರಿದು ಮುಕ್ಕುವಂತೆ ಅಭಿನಯಿಸುತಿದ್ದ ಪಾತ್ರಗಳು ಇಂದಿಗೂ ಜೀವಂತ.

ಇಂತಹ ಕಲಾವಿದೆಯನ್ನ ದೇವರು ಸಹ ಬಿಟ್ಟಿರಲಾರ ಎನ್ನಿಸುತ್ತದೆ, ಕಾರಣ ಅವರು ಚಿತ್ರಗಳಲ್ಲಿ ಗೋಳುಹುಯ್ದುಕೊಂಡ ಬಾಲಣ್ಣ, ನರಸಿಂಹರಾಜು, ಕಲ್ಯಾಣ್ ಕುಮಾರ್ ಎಲ್ಲರು ದೇವರ ಬಳಿ ಇರುವಾಗ ಇವರನ್ನು ಕರೆದು ಕೊಂಡು ಬಿಟ್ಟ..

ಈ ಕಲಾವಿದೆಯನ್ನ ಕಪ್ಪು ಬಿಳುಪು ಚಿತ್ರಗಳಲ್ಲಿ ನೋಡುವುದೇ ಒಂದು ಸುಂದರ ಅನುಭವ..ಮರೆಯಾಗದಿರಲಿ ಈ ಮಾಣಿಕ್ಯ ಸಿನಿ ಹೃದಯವಂತರ ನೆನಪುಗಳಿಂದ!!!


Thursday, October 11, 2012

Redefined Alphabets in Indian Cinema - Big B - 70th Birthday!! (2012)


The man who reinvented the order of the alphabets..ABC.. 

he him self a corporate entity for the movie moguls of World in General and India In particular.  

He enthralled all of the movie buffs in his own way..It is unethical, inhuman or a shameful act to list of top ten movies of him.  Each and every movie is a gem in its own way.  Just to satisfy my ego, am listing out few of his best movies in my opinion which stands tall all the way.

1. Kaala Patthar
Courtesy - Google Images
The intensity filled eyes, very less and less dialogues  the scene where he catch holds of the knife with the sharp edge, and looks deep in the villain eyes..a seriously wonderful intensity filled performance of AB.

2. Anand
Courtesy - Google Images
The star about to explode, the serious acting, the dialogue delivery, no no star image..all this almost gave a head to head fight with Rajesh Khanna. 

3. Sharaabhi
Courtesy - Google Images
He is the one who almost redefined drunken act on the screen. and this movie has out and out sharabhi act through out the movie.  The dance sequence with Jayapradha where he keeps on banging that paayal with effective involvement and the interrupted singing in the same sequence just spectacular. The fight with sharabhi people a new kind.

4. Muqaddar ka Sikandar 
Courtesy - Google Images
Jugal bandhi song with Rekha is just awesome. The "tere bhi na bhi kya jeena.." song acting, and last fight all are too good.

5. Main azaad hoon
Courtesy - Google Images
No heroism, no image..a plain but powerful movie.  Worth watching many times.  Shabhana Azmi powerful performance, and Big B towering performance makes this as a gem. How the media are making fool of the public nicely portrayed in this movie.

6. Aankhen 
Courtesy - Google Images
You write a script..and AB with out any hassles he will get in to the skin.  Here playing a typical cranky role..what a performance from him.

7. Abhimaan
Courtesy - Google Images
How ego can destory the nice family, his brooding eyes, egoistic expression, the frustration everything comes in this great movie.

8. Bombay to Goa
Courtesy - Google Images
Ekdum raw performance..no inhibition, no star giri...

9. Agneepath
Courtesy - Google Images
There is no actor who can repeat his act of Vijay Deenanath Chouhan..is there any?..a master piece performance from the master.

10. Namak Haraam
Courtesy - Google Images
Again friendship, frustration, revenge, sacrifice everything comes in a package in this movie.


There are other movies to which didn't appeared in the listed out movies ..Sholay, Deewaar, Laawaris, Don, Shaan, Zanjeer...and so many..But my personal best are listed above.


Few picks from his movies are

1. Comic timing in Chupke Chupke
2. Dialogues in Deewar
3. Towering performance in Kabhi Kabhi
4. Fire with Fire in Trishul
5. Famous mirror acting in Amar Akbar Anthony
6. Famous Pan dance in Don
7. Mere Angaane mein dance in Lawaris
8. Intensity role in Zanjeer
9. Action, Drama, Humor in Sholay
10. Super dance for Apni to jaise taise in Lawwaris and Pagha Gungru..in Namak Halaal

many more endless....

He is celebrating 70th Birthday..a milestone in its own way in the hindu tradition.  

The man who is stepping in to 70th year..but has a enthusiasm of a teenager.  

Common friends let us wish the Emperor of Indian Cinema's Magical Kingdom The Amitabh Bachhan..

a special birthday..

Happy Birthday to God of Indian Cinema....Amitabh Bachhan!!!

Wednesday, July 18, 2012

Rajesh Khanna - The Phenomena (2012)

जिन्दगी बादी होनी चाहिहे लम्बी नही।..!!!


His famous dialogue from the evergreen movie "Anand"


He wrote a new chapter in the movie..irrespective of the language barrier.  He created his own path..where few dreaded to tread along.


His style, the looks, the tweaky smile, nodding head..all these made him a first of its kind in the movie world. He was simple man's lover boy.  


The scene where Rajesh says to Amitabh..."am seeing my death in your eyes..." my all time favorite dialogue. The beauty of friendship echoes in those words!!!!


The greatest movies I admire him was in Anand,  Namak Haram & Bawarchi. These are the perfect university for how lead the life.  


I admire him on most of his movies...but the best pick are :


1. Anand : How to lead the life when you know you are at the end of the tunnel.  His body language, dialogues, songs..his jugal bandhi with Amitabh, Johny Walker are still fresh in my memory.


2. Namak Haram : Always look at the situation from close quarters...be with them..then you realise the pain.  How neatly explains this basic principle in the movie..tailor made for Rajesh & Amitabh.


3. Baawarchi: Always we tend to miss the small small things which blows us out of the proportion..and ultimately we live in the mess...just take the small threads & neatly tie it..it becomes a perfect fabric.  just iron out the small small differences..you will get wrinkle free life..how beautifully essayed in this movie.


Ironically all the above three movies were from the table of Hrishikesh Mukherjee..and no doubt all these are few master pebbles from his table.


Long live Rajesh Khanna..you will be there with us forever... dialogue from your own movie...



आनंद मरा नही...आनंद मरेते नही।.. 


राजेश खन्न मरा नही राजेश खन्न मरते नही।..

ರಾಜೇಶ್ ಖನ್ನ...ಒಂದು ಸುಂದರ ಹೊಂಗನಸು (2012)

जिन्दगी बादी होनी चाहिहे लम्बी नही।..


ಅದ್ಧುತವಾದ ಸಂಭಾಷಣೆ.ಆನಂದ್ ಚಿತ್ರದಿಂದ.


ತನ್ನ ನಗು ಮುಖ, ರಾಗವಾಗಿ ಸಂಭಾಷಣೆ ಹೇಳುವ ಪರಿ, ಸುಂದರ ನಡಿಗೆ..ಆಗಿನ, ಈಗಿನ ಯುವಕ, ಯುವತಿಯರೆಲ್ಲರ ಮನವನ್ನು ಕದ್ದ ನಾಯಕ..


ಸಿನಿಮಾ ನಾಯಕನಾಗಲು ಕಟ್ಟು ಮಸ್ತಾದ ದೇಹವಿರಲೇ ಬೇಕು ಎನ್ನುವ ಅಲಿಖಿತ ನಿಯಮವನ್ನು ಕಿತ್ತು ಹಾಕಿದ ಅನೇಕ ನಾಯಕರಲ್ಲಿ ಮೊದಲಿಗೆ ನಿಲ್ಲುವಾತ ಈತ...ಆಗಿನ ಎಲ್ಲ ನಾಯಕರು ಒಂದಲ್ಲ ಒಂದು ಸ್ಟೈಲ್ ಗೆ ಹೆಸರಾಗಿದ್ದರು.  ರಾಜ್ ಕಪೂರ್ ದೇವಾನಂದ್, ದಿಲೀಪ್ ಕುಮಾರ್, ಶಮ್ಮಿ ಕಪೂರ್, ಮನೋಜ್ ಕುಮಾರ್, ಜಾಯ್ ಮುಖರ್ಜೀ,ಸುನಿಲ್ ದತ್, ಹೀಗೆ...ಅವರ ಮಧ್ಯೆ ತನ್ನ ತನವನ್ನು ಕಾಪಾಡಿಕೊಂಡು ಹಾಗೆಯೇ ಹೊಸದೊಂದು ಶಖೆಯನ್ನು  ಹುಟ್ಟು ಹಾಕಿದ ಕಲಾವಿದ...


ಶಕ್ತಿ ಸಾಮಂತ ನೀಡಿದ ಅದ್ಭುತ ಚಿತ್ರ ಆರಾಧನಾ..ಇಲ್ಲಿಂದ ಶುರುವಾಯಿತು ಕಿಶೋರ್-ರಾಜೇಶ್ ಜುಗಲ್ ಬಂಧಿ...
ಸುಲಲಿತ ಸಂಭಾಷಣೆ, ಹಾಡುಗಳು..ನಾಯಕಿಯರ ಜೊತೆ ಪ್ರೀತಿ, ಪ್ರೇಮ ಎಲ್ಲದರಲ್ಲೂ ಒಂದು ತರಹ ಹೊಸತನ ತಂದ ನಟ..


ನನಗೆ ಅತ್ಯಂತ ಪ್ರೀತಿಯ ಚಿತ್ರ ಆನಂದ್ ಹಾಗು ನಮಕ್ ಹರಾಮ್...ಇಬ್ಬರು ಸೂಪರ್ ಸ್ಟಾರ್ ಗಳು ಒಂದೇ ಚಿತ್ರದಲ್ಲಿ ಅಭಿನಯಿಸಿದ ಅತ್ಯುತ್ತಮ ಚಿತ್ರಗಳು.


ಆನಂದ್ ಸಿನಿಮಾದಲ್ಲಿ ರಾಜೇಶ್ ಬಿಟ್ಟರೆ ಬೇರೆ ಇನ್ಯಾರು ಆ ಪಾತ್ರಕ್ಕೆ ನ್ಯಾಯ ಒದಗಿಸಬಲ್ಲರು ಎನ್ನುವ ಸಂದೇಹ ಇವತ್ತಿಗೂ ನನ್ನ ಕಾಡುತ್ತದೆ..


ಆನಂದ್, ನಮಕ್ ಹರಾಮ್, ಬಾವರ್ಚಿ, ಕಟಿ ಪತಂಗ್, ಅನುರೋದ್, ಆಪ್ ಕಿ ಕಸಂ ನನ್ನ ಮೆಚ್ಚಿನ ಚಿತ್ರಗಳು..


ಆನಂದ್ ಸಿನಿಮಾದ ಕಡೆ ಸಂಭಾಷಣೆ...


आनंद मरा नही...आनंद मरेते नही।.. 


राजेश खन्न मरा नही...... राजेश खन्न मरते नही।..
ಯಾವಾಗಲೂ  ಹಸಿರಾಗಿ, ಉಸಿರಾಗಿ ತಮ್ಮ ಚಿತ್ರಗಳ ಮೂಲಕ ನಮ್ಮ ಮನದಲ್ಲಿ ಸದಾ ಇರುತ್ತಾರೆ ರಾಜೇಶ್ ಖನ್ನ...

Tuesday, July 10, 2012

ಕಲಿಯುಗ - ಭಾವನಾ ಲೋಕದ ಚಿತ್ರ (1984)


ಸಾವಿತ್ರಿ..ತನ್ನ ಗಂಡನ್ನ ಉಳಿಸಿಕೊಳ್ಳಲು ಯಮರಾಜನ ಜೊತೆ ವಾಗ್ವಾದ ನಡೆಸಿ ಗೆದ್ದಳು..ಇದಕ್ಕೆ ಸ್ವಲ್ಪ ಅಪವಾದ ಎನ್ನುವಂತೆ ತಾಯಿ ಹೃದಯ ಮಕ್ಕಳಿಗೋಸ್ಕರ ಮಿಡಿಯುತ್ತೆ ಅನ್ನುವ ವಿಷಯವನ್ನು ಹಿಡಿದು ಮಾಡಿದ ಚಿತ್ರ "ಕಲಿಯುಗ"

ನನ್ನ ಅಮ್ಮ ನನ್ನನ್ನು  ಹನುಮಂತನಗರದ ರಾಜಲಕ್ಷ್ಮಿ ಎನ್ನುವ ಟಾಕಿಸ್ಗೆ(ಟೆಂಟ್) ಕರೆದು ಕೊಂಡು ಹೋದ ಏಕೈಕ ಚಿತ್ರ...

ಒಂದು ಸುಂದರ ಜಗತನ್ನು ನನಗೆ ಪರಿಚಯ ಕೊಟ್ಟರು..ನಾನು ಭಾವನಾ    ಲೋಕದಲ್ಲಿ ತೇಲಲು ಶುರು ಮಾಡಿದ್ದೂ ಬಹುಶಃ ಇಲ್ಲಿಂದಲೇ..

ನನ್ನ ಮೆಚ್ಚಿನ ನಟ ರಾಜೇಶ್ ಅಭಿನಯಿಸಿದ ನನಗೆ ಇಷ್ಟವಾದ ಕೆಲವು ಚಿತ್ರಗಳಲ್ಲಿ ಕಲಿಯುಗ ಮತ್ತು  ದೇವರ ದುಡ್ಡು ಒಂದು... 
http://moved-movies.blogspot.in/2012_01_01_archive.html
ದೇವರ ದುಡ್ಡು ಚಿತ್ರದ ಬಗ್ಗೆ ಬರೆದಿದ್ದೆ..

ಈಗ ಕಲಿಯುಗ ಚಿತ್ರದ ಬಗ್ಗೆ ಬರೆಯೋಣ ಅನ್ನಿಸಿತು.

ರಾಜೇಶ್  - ಕನ್ನಡ ನಟ 
ಇದು ರಿಮೇಕ್ ಚಿತ್ರವಾದರೂ, ಅಮೋಘ ಅಭಿನಯ ನೀಡಿದ ಚಿತ್ರ..ನನ್ನ ನೆಚ್ಚಿನ ಆರತಿ ಕೂಡ ಅದ್ಭುತ ಎನ್ನುವ ರೀತಿಯಲ್ಲಿ ಪೈಪೋಟಿ ಕೊಟ್ಟು ಅಭಿನಯಿಸಿದ ಚಿತ್ರ ಇದು.
ಆರತಿ.ಆಗಿನ ಎಲ್ಲ ಹೆಸರಾಂತ ನಾಯಕರ ಜೊತೆ  ಅಭಿನಯ 
ಕಥೆ ಮಾಮೂಲಿ..ತಂದೆ ತಾಯಿ ಮಕ್ಕಳಿಗೋಸ್ಕರ ಜೀವ ತೇಯ್ದು ಸಾಕುತ್ತಾರೆ..
ರೆಕ್ಕೆ ಬಲಿತ ಹಕ್ಕಿಗಳು ಗೂಡು ಬಿಟ್ಟು ಹೋಗುವಂತೆ ಹಾರಿ ಹೋಗುತ್ತಾರೆ..
ಒಂದು ಚೂರು ರೊಟ್ಟಿ ಕೊಟ್ಟರೆ ಜೀವನವಿಡಿ ಹಿಂದೆ ಬರುವ ಶ್ವಾನದಂತೆ ರಕ್ತ ಸಂಬಂಧವಿಲ್ಲದಿದ್ದರು ನೆರಳಾಗಿ ಸಾಕುವ ಸಾಕು ಮಗ...

ಕಡೆಗೆ ಮಕ್ಕಳಿಗೆ ತಾವು ಜೀವನದಲ್ಲಿ ಎಡವಿ ಬಿದ್ದು..ಮತ್ತೆ ಶರಣು ಅಂತ ಬಂದಾಗ ಅಪ್ಪ ಮಕ್ಕಳಿಗೆ ಶಿಕ್ಷೆ ಕೊಡಬೇಕು ಅಂತ ಬಯಸುತ್ತಾನೆ.

ಆದ್ರೆ ತಾಯಿ ಹೃದಯ ತಾನು ಗಂಡನ ಕಷ್ಟದಲ್ಲಿ ನೆರಳಾಗಿ ಜೊತೆಯಿದ್ದು..ಹೆಗಲಿಗೆ ಹೆಗಲು ಕೊಟ್ಟು ನಿಂತರು..ಕಡೆಗೆ ಬಯಸುವುದು ಮಕ್ಕಳ ಸಾನಿಧ್ಯ

ಕಡೆಗೆ ಗಂಡ ಹೆಂಡತಿಯನ್ನು ಅರ್ಥ ಮಾಡಿಕೊಂಡಿದ್ದರು ಕೂಡ, ಮಕ್ಕಳ ಮೇಲಿನ ಕೋಪಕ್ಕೆ ದೂರ ನಿಲ್ಲಲು ನಿರ್ಧಾರ ಮಾಡಿ..ಹೆಂಡತಿಯ ದುಡುಕು ಮಾತುಗಳಿಂದ ನೊಂದು ಹೃದಯಾಘಾತವಾಗಿ ಮಡಿಯುತ್ತಾನೆ..ಮತ್ತು ಉಯಿಲು ಪತ್ರದಲ್ಲಿ ತನ್ನ ಎಲ್ಲ ಆಸ್ತಿಯ ಬಹು ಭಾಗವನ್ನು ತನ್ನ ಸಾಕು ಮಗನಿಗೆ ಬಿಟ್ಟು, ಮಡದಿಯ ಪುತ್ರ ಮೋಹಕ್ಕೆ ಕೆಲವು ಲಕ್ಷ ರುಪಾಯಿಗಳನ್ನು ಕೊಡುವುದು ಎಂದು ಬರೆದಿರುತ್ತಾನೆ

ಮಕ್ಕಳಿಗೆ ತಮ್ಮ ತಪ್ಪು ಅರಿವಾಗುವಷ್ಟರಲ್ಲಿ ಪಿತನ ಕಳೆದುಕೊಂಡು ಅನಾಥವಾಗುತ್ತಾರೆ..

ರಾಜೇಶ್ ಜೀವಮಾನದ ಶ್ರೇಷ್ಠ ನಟನೆ..ಪ್ರತಿಯೊಂದು ಸನ್ನಿವೇಶವನ್ನು ಅನುಭವಿಸಿ ಅಭಿನಯಿಸಿದ್ದಾರೆ..ಅವರು ಹೇಳುವ ಸಂಭಾಷಣೆ.."ಸಾವು ತಾನಾಗೆ ಬರುವವರೆಗೆ ಸಾಯಲು ಇಷ್ಟ ಪಡುವುದಿಲ್ಲ..ಸತ್ತ ಮೇಲೂ ಬದುಕಲು ಇಷ್ಟ ಪಡುತ್ತೇನೆ.." ಅದ್ಭುತ ಸಾಲುಗಳು..ರಾಜೇಶ್ ಪ್ರತಿಯೊಂದು ಸಂಭಾಷಣೆಯು ಕರತಲಾಮಲಕ ಎನ್ನುವಷ್ಟು ಸಲೀಸಾಗಿ ಹೇಳಿದ್ದಾರೆ..

ಆರತಿ ಕಣ್ಣಲ್ಲೇ ಭಾವನೆಗಳನ್ನು ವ್ಯಕ್ತ ಪಡಿಸುತ್ತಾ..ತನ್ನ ಮಕ್ಕಳೆಲ್ಲ ಮೋಸ ಮಾಡಿ ಬಿಟ್ಟು ಹೋದಾಗ ತನ್ನ ಸಾಕು ಮಗನನ್ನು ಕರೆದು "ನಂದೀಶ ಯಾಕೋ ನನ್ನ ಹೊಟ್ಟೆಯಲ್ಲಿ ಹುಟ್ಟಲಿಲ್ಲ?" ಎಂದು ಹೇಳುವ ದೃಶ್ಯ ನಿಜಕ್ಕೂ ಕಣ್ಣೇರು ತರಿಸುತ್ತೆ ...

ಆರತಿಯಾ ಅಭಿನಯ ಮೆಚ್ಚಿದ ಕೆಲವು ಚಿತ್ರಗಳ ದೃಶ್ಯಗಳಲ್ಲಿ  ಇದು ಒಂದು.. ಕಡೆಗೆ ಮಕ್ಕಳ ಮೇಲಿನ ಪ್ರೀತಿಯಿಂದ ಗಂಡನಿಗೆ "ನಿಮ್ಮ ಹೃದಯ ಕಲ್ಲು..ಕಲ್ಲು" ಎಂದು ಹೇಳುವ ದೃಶ್ಯ..ತಾಯಿ ಪ್ರೇಮವನ್ನು ಸಾರಿ ಸಾರಿ ಹೇಳುತ್ತದೆ...ಅಮೋಘ ಅಭಿನಯ..

ನನ್ನ ಅಚ್ಚು ಮೆಚ್ಚಿನ ಹಾಗು ನಾನು ಆರಾಧಿಸುವ ಬಾಲಣ್ಣ ಈ ಚಿತ್ರದಲ್ಲಿ ಹೇಳುವ ಸಂಭಾಷಣೆ "ನಾನು ಹೋಗೋಲ್ಲ..ನನ್ನ ಈ ಮನೆಯಿಂದ ಹೊರಗೆ ಹಾಕಬೇಡಿ.." ಎಂದು ಮಳೆಯಲ್ಲಿ ತೋಯುತ್ತ ಹೇಳುವ ಅಭಿನಯ..ಮಳೆಯಲ್ಲೂ ಕಣ್ಣೀರು ತರಿಸುತ್ತೆ.... 
ಅಭಿನಯದ ವಿಶ್ವ ಕೋಶ...ನಮ್ಮ ಬಾಲಣ್ಣ 
ಗಂಡನ ಮೇಲೆ ಪ್ರೀತಿ ಮಮಕಾರ ಎಷ್ಟೇ ಇದ್ದ್ದರು.. ತಾನು ಜನ್ಮ ನೀಡಿದ ಕಂದಮ್ಮಗಳು ಏನೇ ತಪ್ಪು ಮಾಡಿದರು ಅದನ್ನು ಕ್ಷಮಿಸುವ ಉದಾರ ಗುಣ ತಾಯಿಯಲ್ಲಿ ತೋರುವ ಕಥೆಯಲ್ಲಿ ಪ್ರತಿಯೊಬ್ಬರ ಅಭಿನಯ ಸ್ಮರಣೀಯ...

ಸಾವಿರ ಜನುಮ ಬರಲೇನು..ನೀನು ಇರುವಾಗ ನನಗೆ ಭಯವೇನು..
ನಿಮ್ಮ ತೊಳಲ್ಲಿ ನಾ ಸೇರೆಯಾದಾಗ ಸಾವು ಕೂಡ ಹಿತವೇನು
ಜೀವನ ನನಗೆ ಸಿಹಿಯಾಯ್ತು ..ಕಹಿ ನೀ ಬಂದು ಬಾಳಿಂದ ದೂರಾಯ್ತು.. 
ಎಂತಹ ಸೊಗಸಾದ ಸಾಲುಗಳು..ದಾಂಪತ್ಯ ಅಂದ್ರೆ ಇದೆ ಅಲ್ಲವೇ...

ತಾಯಿ ಜನ್ಮ ಕೊಡುತ್ತಾಳೆ
ತಂದೆ ಬಾಳು ಕೊಡುತ್ತಾನೆ..
ತಾಯಿ ಕ್ಷಮಿಸುತ್ತಾಳೆ
ತಂದೆ ಶಿಕ್ಷಿಸಿ ದಾರಿ ತೋರುತ್ತಾನೆ..
ಆದರೆ ಪ್ರೀತಿಸಿ, ಶಿಕ್ಷಿಸಿ, ಕ್ಷಮಿಸುವ ಉದಾರಿಗಳು 
ಅವರು ಯಾರು ಎಂದರೆ...
ತಂದೆ ತಾಯಿ ಮಾತ್ರ..
ಅದು ಸಾರ್ವಕಾಲಿಕ ಸತ್ಯ..

Saturday, June 16, 2012

12 Angry Men (1957)

This is one of the rare movie where there is no show bazzy to the heights!!!!  

The movie counts on the human emotion. The movie is a court room drama all the way for about 1.30 Hours.  For Indian audience this movies sounds different, as there is no jury system in our judiciary, but it closely reflects our village panchayat, where elders of the village usually decides guilty or not guilty after examination of the facts and the truths.

This movies clearly shows the prejudice is the word which can act more on human psyche.  The movie depicts any decisions, or judging on anything should never be suicidal, churn the facts, situation to come out with a clear words than judging something without knowing the facts.

We can not think something..and ink something that is the essence of the whole movie!!!

This movie shows various shades of human mentality, worth watching, nice dialogues, tight screenplay, and wonderful portraying of each character according to the shades.